ರಾಮದಾಸ್ ಅಠಾವಳೆ 
ದೇಶ

ನಾವಿಬ್ಬರು ನಮಗೊಂದು': ಒಂದು-ಮಗು ನೀತಿ ಪರ ಕೇಂದ್ರ ಸಚಿವ ಅಠಾವಳೆ ಬ್ಯಾಟಿಂಗ್

ತಮ್ಮ ಪಕ್ಷವು ಒಂದು-ಮಗುವಿನ ನೀತಿಯನ್ನು ಬೆಂಬಲಿಸುತ್ತದೆ. ದೇಶದಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸಬೇಕಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠಾವಳೆ ಅವರು ಶನಿವಾರ ಹೇಳಿದ್ದಾರೆ.

ಅಹಮದಾಬಾದ್: ತಮ್ಮ ಪಕ್ಷವು ಒಂದು-ಮಗುವಿನ ನೀತಿಯನ್ನು ಬೆಂಬಲಿಸುತ್ತದೆ. ದೇಶದಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸಬೇಕಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠಾವಳೆ ಅವರು ಶನಿವಾರ ಹೇಳಿದ್ದಾರೆ.

ಹಿಂದುಗಳು ಬಹುಸಂಖ್ಯಾತರಾಗಿದ್ದರೇ ಮಾತ್ರ ಸಂವಿಧಾನ ಮತ್ತು ಜಾತ್ಯತೀತತೆಯ ಬಗ್ಗೆ ಮಾತನಾಡಲು ಸಾಧ್ಯ ಎಂದು ಹೇಳಿದ್ದ 
ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ, ವಾಗುತ್ತದೆ, ಹಿಂದೂ ಜನಸಂಖ್ಯೆಯು ಕಡಿಮೆಯಾಗವು ಯಾವುದೇ ಸಾಧ್ಯತೆಯಿಲ್ಲ ಎಂದು ಅವರು ಹೇಳಿದರು.

"ಹಿಂದೂ ಜನಸಂಖ್ಯೆ ಕುಸಿಯುತ್ತಿದೆ ಅಂತ ನನಗೆ ಅನಿಸುತ್ತಿಲ್ಲ. ಹಿಂದೂಗಳು ಹಿಂದೂಗಳಾಗಿಯೇ ಇದ್ದಾರೆ ಮತ್ತು ಮುಸ್ಲಿಮರು ಮುಸ್ಲಿಂ ಆಗಿಯೇ ಇದ್ದಾರೆ. ಎಲ್ಲೋ ಒಬ್ಬರು ಅಥವಾ ಇಬ್ಬರೂ ಹಿಂದೂಗಳು ಅಥವಾ ಮುಸ್ಲಿಮರು ಮತಾಂತರಗೊಂಡಿದ್ದಾರೆ. 

ಸಂವಿಧಾನವು ಜನರು ಇಷ್ಟಪಡುವದನ್ನು ಮಾಡುವ ಹಕ್ಕನ್ನು ನೀಡುತ್ತದೆ" ಎಂದು ಅಠವಾಳೆ ತಿಳಿಸಿದ್ದಾರೆ.

ಜನಸಂಖ್ಯೆಯಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ಪ್ರಮಾಣದಲ್ಲಿ ಹೆಚ್ಚು ಬದಲಾವಣೆಯಾಗುವುದಿಲ್ಲ, "ಮುಸ್ಲಿಮರ ಜನಸಂಖ್ಯೆಯು ಈ ವರ್ಷಗಳಲ್ಲಿ ತೀವ್ರವಾಗಿ ಏರಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT