ನವದೆಹಲಿ: ಇಂದು ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ರೈತರ ಕಿಸಾನ್ ಮಹಾಪಂಚಾಯತ್ ಸಮಾರಂಭಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸತ್ಯದ ಪ್ರತಿಧ್ವನಿ ಕೇಳಿಸುತ್ತಿದೆ, ಈ ಅನ್ಯಾಯದ ಕೇಂದ್ರ ಸರ್ಕಾರ ರೈತರ ಮಾತನ್ನು ಕೇಳಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡಾ ಕೇಂದ್ರದ ವಿರುದ್ಧ ಗುಡುಗಿದ್ದು ಬಿಜೆಪಿಯ ಅಧಿಕಾರದ ಮದ ಬಹಳ ಕಾಲ ನಡೆಯುವುದಿಲ್ಲ. ರೈತರ ಘರ್ಜನೆ ಮುಂದೆ ಮೂರಾಬಟ್ಟೆಯಾಗುತ್ತದೆೀಂದು ಕೆಟಕಿಯಾಡಿದ್ದಾರೆ.
ಇದನ್ನೂ ಓದಿ: ರೈತರ 'ಮಹಾಪಂಚಾಯತ್' ತಡೆಯಲು ಬಂದರೆ ಬಲವಂತವಾಗಿ ನುಗ್ಗುವೆವು: ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯಿತ್ ಗುಡುಗು
ಕೇಂದ್ರದ ನೂತನ ಕೃಷಿ ಕಾನೂನು ವಿರೋಧಿಸಿ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕಿಸಾನ್ ಮಹಾಪಂಚಾಯತ್ ಹಮ್ಮಿಕೊಂಡಿತ್ತು. ಸಾವಿರಾರು ಮಂದಿ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಪಿಎಂ-ಕಿಸಾನ್ ಯೋಜನೆ: ಪ್ರಧಾನಿ ಮೋದಿಯಿಂದ 9ನೇ ಕಂತಿನ ಹಣ ಬಿಡುಗಡೆ, ರೈತರ ಖಾತೆಗೆ ರೂ.1,16,292.88 ಕೋಟಿ ವರ್ಗಾವಣೆ
ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಜೇವಾಲ ಕೂಡ ಹೇಳಿಕೆ ನೀಡಿದ್ದು, ರೈತರಿಂದ ದುಡ್ಡು ಹೊಡೆಯುತ್ತಿರುವವರು ದೇಶದ್ರೋಹಿಗಳು ಎಂದಿದ್ದಾರೆ.