ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಎಂಬಿಬಿಎಸ್ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹಿಂದೂತ್ವ, ಅಂಬೇಡ್ಕರ್ ಬಗ್ಗೆ ಪಾಠ

ಮಧ್ಯಪ್ರದೇಶದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್, ಭಾರತೀಯ ಜನಸಂಘದ ನಾಯಕ ದೀನದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ್ ಮತ್ತು ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಎಂಬಿಬಿಎಸ್ ಮೊದಲ ವರ್ಷದ ವಿದ್ಯಾರ್ಥಿಗಳಿಗೆ...

ಭೋಪಾಲ್: ಮಧ್ಯಪ್ರದೇಶದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್, ಭಾರತೀಯ ಜನಸಂಘದ ನಾಯಕ ದೀನದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ್ ಮತ್ತು ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಎಂಬಿಬಿಎಸ್ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಅಡಿಪಾಯ ಕೋರ್ಸ್‌ನ ಭಾಗವಾಗಿ ಉಪನ್ಯಾಸ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಭಾನುವಾರ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮತ್ತು ವೈದ್ಯಕೀಯ ನೈತಿಕತೆಯನ್ನು ತುಂಬುವ ಗುರಿಯನ್ನು ಇದು ಹೊಂದಿದೆ. ಹೆಡ್ಗೆವಾರ್, ಉಪಾಧ್ಯಾಯ, ಸ್ವಾಮಿ ವಿವೇಕಾನಂದರು ಸಂಘದ ಹಿಂದುತ್ವ ಪ್ಯಾಂಥಿಯನ್‌ನ ಭಾಗವಾಗಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸೈದ್ಧಾಂತಿಕ ಮಾರ್ಗದರ್ಶಕರು ಎಂದು ನಂಬಲಾಗಿದೆ.

ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಆಯುರ್ವೇದದ ಪ್ರಮುಖ ಕೊಡುಗೆದಾರರಲ್ಲಿ ಒಬ್ಬರಾದ ಮಹರ್ಷಿ ಚರಕ ಮತ್ತು ಭಾರತದಲ್ಲಿ ಶಸ್ತ್ರಚಿಕಿತ್ಸೆಯ ಪಿತಾಮಹ ಎಂದು ಕರೆಯಲ್ಪಡುವ ಸುಶ್ರುತ್ ಬಗ್ಗೆಯೂ ಕಲಿಯುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಎಂಬಿಬಿಎಸ್(ಬ್ಯಾಚುಲರ್ ಆಫ್ ಮೆಡಿಸಿನ್, ಬ್ಯಾಚುಲರ್ ಆಫ್ ಸರ್ಜರಿ) ಮೊದಲ ವರ್ಷದ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಹೆಡ್ಗೆವಾರ್ಜಿ, ಉಪಾಧ್ಯಾಯಜಿ, ಸ್ವಾಮಿ ವಿವೇಕಾನಂದಜೀ, ಅಂಬೇಡ್ಕರ್ ಜೀ ಮತ್ತು ಇತರ ಮಹಾನ್ ವ್ಯಕ್ತಿಗಳ ಕುರಿತು ಉಪನ್ಯಾಸ ನೀಡಲಾಗುವುದು. 

ಈ ಮಹಾನ್ ವ್ಯಕ್ತಿಗಳ ಕುರಿತಾದ ಪಾಠಗಳು ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ತತ್ವಗಳು, ಸಾಮಾಜಿಕ ಮತ್ತು ವೈದ್ಯಕೀಯ ನೈತಿಕತೆಯನ್ನು ಅಳವಡಿಸುತ್ತವೆ" ಎಂದು ಸಾರಂಗ್ ಪಿಟಿಐಗೆ ತಿಳಿಸಿದ್ದಾರೆ.

ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷ ಈ ವರ್ಷಾಂತ್ಯದಲ್ಲಿ ಆರಂಭವಾಗುವ ಸಾಧ್ಯತೆಯಿದೆ.

"ನ್ಯಾಷನಲ್ ಮೆಡಿಕಲ್ ಕೌನ್ಸಿಲ್(NMC) ನೈತಿಕ ಮೌಲ್ಯಗಳು (MBBS ನ) ಮೊದಲ ವರ್ಷದಲ್ಲಿ ಫೌಂಡೇಶನ್ ಕೋರ್ಸ್‌ನ ಭಾಗವಾಗಿರಬೇಕು ಎಂದು ಹೇಳಿದೆ. 

ಆದ್ದರಿಂದ ವಿದ್ಯಾರ್ಥಿಗಳ ಗುಣವನ್ನು ನಿರ್ಮಿಸಲು ನಾವು ಈ ಮಹಾನ್ ವ್ಯಕ್ತಿಗಳನ್ನು ಸೇರಿಸಿಕೊಳ್ಳಲು ಯೋಚಿಸಿದ್ದೇವೆ". 
ಫೌಂಡೇಶನ್ ಕೋರ್ಸ್‌ನ ವಿಷಯವನ್ನು ರಾಜ್ಯಗಳು ಅಂತಿಮಗೊಳಿಸುತ್ತವೆ ಎಂದು ಮಧ್ಯ ಪ್ರದೇಶ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT