ಅಭಿಷೇಕ್ ಬ್ಯಾನರ್ಜಿ 
ದೇಶ

ನನ್ನ ವಿರುದ್ಧದ ಯಾವುದೇ ಭ್ರಷ್ಟಾಚಾರ ಆರೋಪ ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ: ಅಭಿಷೇಕ್ ಬ್ಯಾನರ್ಜಿ

ನಾನು ಯಾವುದೇ ಕಾನೂನುಬಾಹಿರ ವಹಿವಾಟಿನಲ್ಲಿ ಭಾಗಿಯಾಗಿರುವುದನ್ನು ಕೇಂದ್ರ ತನಿಖಾ ಸಂಸ್ಥೆಗಳು ಸಾಬೀತುಪಡಿಸಿದರೆ ಸಾರ್ವಜನಿಕವಾಗಿ ನೇಣಿ ಹಾಕಿಕೊಳ್ಳುತ್ತೇನೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್...

ಕೋಲ್ಕತಾ: ನಾನು ಯಾವುದೇ ಕಾನೂನುಬಾಹಿರ ವಹಿವಾಟಿನಲ್ಲಿ ಭಾಗಿಯಾಗಿರುವುದನ್ನು ಕೇಂದ್ರ ತನಿಖಾ ಸಂಸ್ಥೆಗಳು ಸಾಬೀತುಪಡಿಸಿದರೆ ಸಾರ್ವಜನಿಕವಾಗಿ ನೇಣಿ ಹಾಕಿಕೊಳ್ಳುತ್ತೇನೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ.

ಟಿಎಂಸಿ ಸಂಸದನಿಗೆ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿದ್ದಾಗ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಂಡಿದೆ ಎಂದು ಆರೋಪಿಸಿದರು.

"ನವೆಂಬರ್‌ನಲ್ಲಿ ನಾನು ಸಾರ್ವಜನಿಕ ಸಭೆಗಳಲ್ಲಿ ಹೇಳಿದ್ದನ್ನು ನಾನು ಪುನರುಚ್ಚರಿಸುತ್ತೇನೆ, ಯಾವುದೇ ಕೇಂದ್ರ ಸಂಸ್ಥೆಯು 10 ಪೈಸೆಗಳ ಯಾವುದೇ ಅಕ್ರಮ ವಹಿವಾಟಿನಲ್ಲಿ ನನ್ನ ಪಾತ್ರ ಸಾಬೀತುಪಡಿಸಿದರೆ ಯಾವುದೇ ಸಿಬಿಐ ಅಥವಾ ಇಡಿ ನನ್ನ ವಿರುದ್ಧ ತನಿಖೆ ನಡೆಸುವ ಅಗತ್ಯವಿಲ್ಲ. ನಾನೇ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ" ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಸೆಪ್ಟೆಂಬರ್ 6 ರಂದು ದೆಹಲಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ