ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ 
ದೇಶ

ಮೊದಲ ಡೋಸ್ ಪಡೆದ ನಾಲ್ಕು ವಾರ ನಂತರ ಕೋವಿಶೀಲ್ಡ್ 2ನೇ ಡೋಸ್ ಲಸಿಕೆಗೆ ಅವಕಾಶ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೊಚ್ಚಿ: ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿದೇಶಗಳಿಗೆ ತೆರಳುವವರಿಗೆ ಕೋವಿಡ್ ನಿಂದ ರಕ್ಷಣೆ ಪಡೆಯುವ ಸಲುವಾಗಿ ಬೇಗನೆ ಲಸಿಕೆ ಪಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಮತಿ ನೀಡುವುದಾದರೆ ಅದೇ ಸೌಲಭ್ಯವನ್ನು ಉದ್ಯೋಗ ಅಥವಾ ಶಿಕ್ಷಣದ ಉದ್ದೇಶ ಹೊಂದಿದವರಿಗೆ ಯಾಕೆ ನೀಡಬಾರದು ಎಂದು ನ್ಯಾಯಾಧೀಶ ಪಿ. ಬಿ. ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ನೀತಿಯ ಪ್ರಕಾರ, ಮುಂಚಿತವಾಗಿ ಲಸಿಕೆ ಪಡೆಯುವ ಆಯ್ಕೆಯನ್ನು ಜನರು ಹೊಂದಿದ್ದು, ಇದರ ಅನುಷ್ಠಾನಕ್ಕಾಗಿ ಖಾಸಗಿ ಆಸ್ಪತ್ರೆಗಳ ಮೂಲಕ ಪಾವತಿ ಆಧಾರದಲ್ಲಿಯೂ ಲಸಿಕೆ ವಿತರಿಸಲಾಗುತ್ತಿದೆ ಎಂಬುದನ್ನು ಹೈಕೋರ್ಟ್ ಸೆಪ್ಟೆಂಬರ್ ಮೂರರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. 

84 ದಿನಗಳ ಬದಲಿಗೆ ನಾಲ್ಕು ವಾರ ಕಳೆದ ಕೂಡಲೇ ಉದ್ಯೋಗಿಗಳಿಗೆ ಕೋವಿಶೀಲ್ಡ್ ಎರಡನೇ ಲಸಿಕೆ ಡೋಸ್ ನೀಡಲು ಅನುಮತಿ ನೀಡಬೇಕೆಂದು ಕಿಟೆಕ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರಕ್ಕೆ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?