ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ 
ದೇಶ

ಮೊದಲ ಡೋಸ್ ಪಡೆದ ನಾಲ್ಕು ವಾರ ನಂತರ ಕೋವಿಶೀಲ್ಡ್ 2ನೇ ಡೋಸ್ ಲಸಿಕೆಗೆ ಅವಕಾಶ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೊಚ್ಚಿ: ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿದೇಶಗಳಿಗೆ ತೆರಳುವವರಿಗೆ ಕೋವಿಡ್ ನಿಂದ ರಕ್ಷಣೆ ಪಡೆಯುವ ಸಲುವಾಗಿ ಬೇಗನೆ ಲಸಿಕೆ ಪಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಮತಿ ನೀಡುವುದಾದರೆ ಅದೇ ಸೌಲಭ್ಯವನ್ನು ಉದ್ಯೋಗ ಅಥವಾ ಶಿಕ್ಷಣದ ಉದ್ದೇಶ ಹೊಂದಿದವರಿಗೆ ಯಾಕೆ ನೀಡಬಾರದು ಎಂದು ನ್ಯಾಯಾಧೀಶ ಪಿ. ಬಿ. ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ನೀತಿಯ ಪ್ರಕಾರ, ಮುಂಚಿತವಾಗಿ ಲಸಿಕೆ ಪಡೆಯುವ ಆಯ್ಕೆಯನ್ನು ಜನರು ಹೊಂದಿದ್ದು, ಇದರ ಅನುಷ್ಠಾನಕ್ಕಾಗಿ ಖಾಸಗಿ ಆಸ್ಪತ್ರೆಗಳ ಮೂಲಕ ಪಾವತಿ ಆಧಾರದಲ್ಲಿಯೂ ಲಸಿಕೆ ವಿತರಿಸಲಾಗುತ್ತಿದೆ ಎಂಬುದನ್ನು ಹೈಕೋರ್ಟ್ ಸೆಪ್ಟೆಂಬರ್ ಮೂರರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. 

84 ದಿನಗಳ ಬದಲಿಗೆ ನಾಲ್ಕು ವಾರ ಕಳೆದ ಕೂಡಲೇ ಉದ್ಯೋಗಿಗಳಿಗೆ ಕೋವಿಶೀಲ್ಡ್ ಎರಡನೇ ಲಸಿಕೆ ಡೋಸ್ ನೀಡಲು ಅನುಮತಿ ನೀಡಬೇಕೆಂದು ಕಿಟೆಕ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರಕ್ಕೆ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT