ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ 
ದೇಶ

ದೆಹಲಿಯ ಸುಮಾರು 3 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವು: ಉಪ ಮುಖ್ಯಮಂತ್ರಿ ಸಿಸೋಡಿಯಾ

ಶಾಲಾ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯತೆ ಬೆಳೆಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಸೀಡ್ ಮನಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರಿ ಶಾಲೆಯ  ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಮನೀಷ್  ಸಿಸೋಡಿಯಾ ಸೋಮವಾರ ಪ್ರಕಟಿಸಿದರು.

ನವದೆಹಲಿ: ಶಾಲಾ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯತೆ ಬೆಳೆಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಸೀಡ್ ಮನಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರಿ ಶಾಲೆಯ  ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಮನೀಷ್  ಸಿಸೋಡಿಯಾ ಸೋಮವಾರ ಪ್ರಕಟಿಸಿದರು. ಈ ಉಪ್ರಕ್ರಮದ ಅಡಿಯಲ್ಲಿ ದೆಹಲಿಯಾದ್ಯಂತ 1 ಸಾವಿರ ಸರ್ಕಾರಿ ಶಾಲೆಗಳ 3 ಲಕ್ಷದ 50 ಸಾವಿರ ಸರ್ಕಾರಿ ಶಾಲೆಯ ಮಕ್ಕಳಿಗೆ 2 ಸಾವಿರ ರೂ. ನೀಡಲಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಸೋಡಿಯಾ, ದೆಹಲಿ ಸರ್ಕಾರ ಎರಡು ವರ್ಷಗಳ ಹಿಂದೆ ಉದ್ಯಮಶೀಲತೆ ಮನಸ್ಥಿತಿಯ ಪಠ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು. ಇದು ವಿದ್ಯಾರ್ಥಿಗಳು ಉದ್ಯೋಗಾಕಾಂಕ್ಷಿಗಳಿಗಿಂತಲೂ ಉದ್ಯೋಗ ನೀಡುವ ಗುರಿಯನ್ನು ಹೊಂದಿದೆ. ಕಳೆದ ಎರಡು ವರ್ಷಗಳಲ್ಲಿ ಈ ಪಠ್ಯಕ್ರಮ ಭಾರೀ ಪ್ರಭಾವವನ್ನುಂಟು ಮಾಡಿದೆ. ಒಬ್ಬ ವಿದ್ಯಾರ್ಥಿ ಮಾಸ್ಕ್ ತಯಾರಿಸುವುದನ್ನು ಪ್ರಾರಂಭಿಸಿದರೆ, ಇನ್ನೊಬ್ಬರು ಯೋಗವನ್ನು ಕಲಿಸಲು ಆರಂಭಿಸಿದರು. 12 ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿ ಕಾಜಲ್ ತಾನೇ  ಸ್ವಂತದ್ದಾಗಿ ಅಕೌಂಟಿಂಗ್ ಕಂಪನಿ ಸ್ಥಾಪಿಸಿ,  20 ಜನರಿಗೆ ಉದ್ಯೋಗ ನೀಡುತ್ತಿದ್ದಾಳೆ, ಆಕೆ 15 ಲಕ್ಷ ರೂ. ವಹಿವಾಟು ನಡೆಸುತ್ತಿದ್ದಾಳೆ. ಈ ಪಠ್ಯ ಕ್ರಮದ ಪ್ರಮುಖ ಅಂಶ ಸೀಡ್ ಮನಿ  ಪ್ರಾಜೆಕ್ಟ್ ಆಗಿದೆ ಎಂದರು.

ಕಿಚ್ಡಿಪುರದ ಶಾಲೆಯೊಂದರಲ್ಲಿ ಪೈಲಟ್ ಯೋಜನೆಯಾಗಿ ಸೀಡ್ ಮನಿ ಪ್ರಾಜೆಕ್ಟ್ ಆರಂಭಿಸಿ  1 ಸಾವಿರ ರೂ. ನೀಡಲಾಗುತಿತ್ತು. ಇದರಿಂದ ಮಕ್ಕಳು ಸ್ವಂತ ವ್ಯವಹಾರ ಆರಂಭಿಸುತ್ತಿದ್ದರು. ಇದೇ ಶಾಲೆಯ 41 ಮಕ್ಕಳು ಒಂಬತ್ತು ಗುಂಪುಗಳನ್ನು ರಚಿಸುವ ಮೂಲಕ  ಸೀಡ್ ಮನಿ ಹೂಡಿಕೆ ಆರಂಭಿಸಿದರು. ಎಲ್ಲರೂ ಲಾಭದಲ್ಲಿ ಮುಂದುವರೆಯುತ್ತಿರುವುದಾಗಿ. ಇದು ನಿರುದ್ಯೋಗಕ್ಕೆ ಪರಿಹಾರವಾಗಲಿದ್ದು, ದೇಶಕ್ಕೆ ಅಗತ್ಯವಾಗಿದೆ ಎಂದು ಅವರು ಹೇಳಿದರು. 

ಪೈಲಟ್ ಪ್ರಾಜೆಕ್ಟ್ ಅಡಿಯಲ್ಲಿ ಕಿಚ್ಡಿಪುರದ ಶಾಲೆಯ ಮಕ್ಕಳಿಗೆ ತಲಾ 1 ಸಾವಿರ ಸೀಡ್  ನೀಡಲಾಗುತಿತ್ತು. ಇದನ್ನುಇದೀಗ 2 ಸಾವಿರ ರೂ. ಗೆ ಹೆಚ್ಚಿಸಲಾಗಿದೆ. ಮಂಗಳವಾರದಿಂದ ದೆಹಲಿಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸೀಡ್ ಮನಿ ಪ್ರಾಜೆಕ್ಟ್ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT