ಸಾಂದರ್ಭಿಕ ಚಿತ್ರ 
ದೇಶ

ನೀಟ್- ಯುಜಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ನವದೆಹಲಿ: ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ಸೆಪ್ಟೆಂಬರ್ 12 ರಂದು ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ, ಪರೀಕ್ಷಾ ದಿನಾಂಕಗಳಿಗೆ ಸಂಬಂಧಿಸಿದಂತೆ ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಆದಾಗ್ಯೂ, ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದ್ದು, ಕಾನೂನಿನ ಪ್ರಕಾರ ಶೀಘ್ರದಲ್ಲಿಯೇ ಅದು  ಬಗೆಹರಿಯಬಹುದೆಂದು ನ್ಯಾಯಾಲಯ ಹೇಳಿದೆ. 

ಅರ್ಜಿದಾರರ ವಾದವು ಶೇಕಡಾ 99 ರಷ್ಟು ವಿದ್ಯಾರ್ಥಿಗಳಿಗೆ ಅನ್ವಯವಾಗಲ್ಲ, ಕೇವಲ ಶೇ.1 ರಷ್ಟು ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ. ಆದರೆ, ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರ ಪರ ವಕೀಲರಾದ ಶೋಯೆಲ್ ಅಲಂ ಅವರಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. 

ಸೆಪ್ಟೆಂಬರ್ 12 ರಂದು ಇನ್ನಿತರ ಅನೇಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೀಟ್- ಯುಜಿ ಪರೀಕ್ಷೆಯನ್ನು ಮುಂದೂಡಬೇಕೆಂದು ಅಲಂ ವಾದಿಸಿದರು. ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ನ್ಯಾಯಪೀಠ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT