ಸಾಂದರ್ಭಿಕ ಚಿತ್ರ 
ದೇಶ

ನೀಟ್- ಯುಜಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ನವದೆಹಲಿ: ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ಸೆಪ್ಟೆಂಬರ್ 12 ರಂದು ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ, ಪರೀಕ್ಷಾ ದಿನಾಂಕಗಳಿಗೆ ಸಂಬಂಧಿಸಿದಂತೆ ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಆದಾಗ್ಯೂ, ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದ್ದು, ಕಾನೂನಿನ ಪ್ರಕಾರ ಶೀಘ್ರದಲ್ಲಿಯೇ ಅದು  ಬಗೆಹರಿಯಬಹುದೆಂದು ನ್ಯಾಯಾಲಯ ಹೇಳಿದೆ. 

ಅರ್ಜಿದಾರರ ವಾದವು ಶೇಕಡಾ 99 ರಷ್ಟು ವಿದ್ಯಾರ್ಥಿಗಳಿಗೆ ಅನ್ವಯವಾಗಲ್ಲ, ಕೇವಲ ಶೇ.1 ರಷ್ಟು ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ. ಆದರೆ, ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರ ಪರ ವಕೀಲರಾದ ಶೋಯೆಲ್ ಅಲಂ ಅವರಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. 

ಸೆಪ್ಟೆಂಬರ್ 12 ರಂದು ಇನ್ನಿತರ ಅನೇಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೀಟ್- ಯುಜಿ ಪರೀಕ್ಷೆಯನ್ನು ಮುಂದೂಡಬೇಕೆಂದು ಅಲಂ ವಾದಿಸಿದರು. ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ನ್ಯಾಯಪೀಠ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT