ಯಶವಂತ್ ಸಿನ್ಹಾ 
ದೇಶ

ತಾಲಿಬಾನ್ ಸರ್ಕಾರದೊಂದಿಗೆ ಭಾರತ ವ್ಯವಹರಿಸಬಾರದು: ಯಶವಂತ್ ಸಿನ್ಹಾ

ಅಫ್ಘಾನಿಸ್ತಾನದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದೊಂದಿಗೆ ಭಾರತ ಯಾವುದೇ ರೀತಿಯ ವ್ಯವಹಾರ ನಡೆಸಲು ಸಾಧ್ಯವಿಲ್ಲ ಮತ್ತು ನಡೆಸಬಾರದು ಎಂದು ತಾಲಿಬಾನ್ ಉಸ್ತುವಾರಿ...

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದೊಂದಿಗೆ ಭಾರತ ಯಾವುದೇ ರೀತಿಯ ವ್ಯವಹಾರ ನಡೆಸಲು ಸಾಧ್ಯವಿಲ್ಲ ಮತ್ತು ನಡೆಸಬಾರದು ಎಂದು ತಾಲಿಬಾನ್ ಉಸ್ತುವಾರಿ ಸಚಿವ ಸಂಪುಟ ಘೋಷಿಸಿದ ನಂತರ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಯಶವಂತ್ ಸಿನ್ಹಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

"ಅಫ್ಘಾನಿಸ್ತಾನದಲ್ಲಿ ಹೊಸದಾಗಿ ರಚನೆಯಾಗಿರುವ ತಾಲಿಬಾನ್ ಸರ್ಕಾರದೊಂದಿಗೆ ಭಾರತ ಯಾವುದೇ ರೀತಿಯ ವ್ಯವಹಾರ ನಡೆಸಬಾರದು" ಎಂದು ಯಶವಂತ್ ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ತಾಲಿಬಾನ್‌ನೊಂದಿಗೆ ವ್ಯವಹರಿಸುವ ಬಗ್ಗೆ ಭಾರತ ಮುಕ್ತವಾಗಿರಬೇಕು ಮತ್ತು ಕಾಬೂಲ್‌ನಲ್ಲಿ ತನ್ನ ರಾಯಭಾರ ಕಚೇರಿಯನ್ನು ತೆರೆಯಬೇಕು. ರಾಯಭಾರಿಯನ್ನು ವಾಪಸ್ ಕಳುಹಿಸಬೇಕು ಎಂದು ಸಿನ್ಹಾ ಅವರು ಹೇಳಿದ್ದರು.

ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್  ಅಖುಂದ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಗಳವಾರ ತಾಲಿಬಾನ್ ಘೋಷಿಸಿದೆ.

ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರದಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂದು ತಾಲಿಬಾನ್ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ