ಗೆಹನಾ ವಸಿಷ್ಠ 
ದೇಶ

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಟ್ ನಟಿ ಗೆಹನಾ ವಸಿಷ್ಠ ಜಾಮೀನು ಅರ್ಜಿ ವಜಾ, ಸುಪ್ರೀಂ ಮೆಟ್ಟಿಲೇರಲು ನಟಿ ಪರ ವಕೀಲರ ನಿರ್ಧಾರ

ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಮುಂಬೈ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಇಂದು ಬಾಂಬೇ ಹೈಕೋರ್ಟ್ ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ನಟಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಆಕೆಯ ಪರ ವಕೀಲರು ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಇನ್ನು ಅಶ್ಲೀಲ ಚಿತ್ರ ನಿರ್ಮಾಣ ಮತ್ತು ವೆಬ್ ಸೈಟ್ ಗೆ ಅಪ್ಲೋಡ್ ಮಾಡುವ ಹಗರಣದಲ್ಲಿ ನಟಿ ಗೆಹನಾ ವಸಿಷ್ಠ್ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಮುಂಬೈ ಅಪರಾಧ ವಿಭಾಗದ ಮುಂಬಯಿ ಪ್ರಾಪರ್ಟಿ ಸೆಲ್ ಅವರನ್ನು ಬಂಧಿಸಿತ್ತು.

ತಮ್ಮ ಅಶ್ಲೀಲ ಚಿತ್ರದಲ್ಲಿ ನಟಿಸುವಂತೆ ಆ ಚಿತ್ರದ ನಿರ್ದೇಶಕಿ ಕೂಡ ಆಗಿದ್ದ ಗೆಹನಾ ವಸಿಷ್ಠ ಅವರು, ಮಹಿಳೆಯೋರ್ವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ವಿಡಿಯೋವನ್ನು ಎಡಿಟ್ ಮಾಡಿ ಅಪ್ಲೋಡ್ ಮಾಡಲಾಗುವುದು ಎಂದು ಹೇಳಿ ಮಹಿಳೆ ನಟಿಸುವಂತೆ ಮಾಡಿದ್ದ ಗೆಹನಾ ಬಳಿಕ ಅದನ್ನು ಎಡಿಟ್ ಮಾಡದೇ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈಗಾಗಲೇ ಎಡಿಟ್ ಮಾಡದ ಹಲವು ಅಶ್ಲೀಲ ಚಿತ್ರಗಳನ್ನು ಗೆಹನಾ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. 

ಮಿಸ್ ಏಷ್ಯಾ ಬಿಕಿನಿ ವಿಜೇತೆ ಕೂಡ ಆಗಿರುವ ಗೆಹನಾ ಆಲ್ಟ್ ಬಾಲಾಜಿ ವೆಬ್ ಸರಣಿ ಗಂದಿ ಬಾತ್ ನ ಮೂಲಕ ಹೆಸರುವಾಸಿಯಾಗಿದ್ದಾರೆ. ಇದರ ಹೊರತಾಗಿ, ಅವರು ಕೆಲವು ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT