ಸಾಂದರ್ಭಿಕ ಚಿತ್ರ 
ದೇಶ

ಭೋಪಾಲ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ, ಜೆಡಿಯು ನಾಯಕರು ಸೇರಿ ನಾಲ್ವರ ಬಂಧನ

ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಹರ್ಯಾಣ ಮೂಲದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಜೆಡಿಯು ನಾಯಕನನ್ನು....

ಭೋಪಾಲ್: ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಹರ್ಯಾಣ ಮೂಲದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಜೆಡಿಯು ನಾಯಕನನ್ನು ಭೋಪಾಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕಳೆದ ತಿಂಗಳು ಭೋಪಾಲ್‌ನ ಟಿಟಿ ನಗರ ಪ್ರದೇಶದ ಹೋಟೆಲ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು(ಎಲ್ಲರೂ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯವರು) ಅಶೋಕ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮೂವರಲ್ಲಿ ಆಡಳಿತಾರೂ ಬಿಜೆಪಿಯ ಮಾಜಿ ಮಂಡಲ ಅಧ್ಯಕ್ಷರು ಮತ್ತು ದಿಂಡೋರಿ ಜಿಲ್ಲೆಯ ಪ್ರಸ್ತುತ ಕಚೇರಿ ಕಾರ್ಯದರ್ಶಿ ಮನೀಶ್ ನಾಯಕ್, ಜೆಡಿಯು ದಿಂಡೋರಿ ಜಿಲ್ಲಾ ಅಧ್ಯಕ್ಷ ದಿನೇಶ್ ಅವಧಿಯಾ ಮತ್ತು ಪೆಟ್ರೋಲ್ ಪಂಪ್ ಮಾಲೀಕ ಅಮಿತ್ ಸೋನಿ ಸೇರಿದ್ದಾರೆ. ಬಂಧಿತ ಬಿಜೆಪಿ ನಾಯಕನ ಪತ್ನಿ ದಿಂಡೋರಿ ನಗರ ಪಾಲಿಕೆ ಪರಿಷತ್ ನಲ್ಲಿ ಕಾರ್ಪೊರೇಟರ್ ಆಗಿದ್ದಾರೆ.

ಬಂಧಿತ ಮೂವರ ಮೇಲೆ ಐಪಿಸಿ ಸೆಕ್ಷನ್ ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ(ಪೋಕ್ಸೊ)ಕಾಯ್ದೆ 2012 ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ (ಎಎಸ್‌ಪಿ-ಭೋಪಾಲ್) ರಾಜೇಶ್ ಭಡೋರಿಯಾ ಬುಧವಾರ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಮೊದಲಿಗೆ, ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದರು. ನಂತರ ಅಶೋಕ್ ಗಾರ್ಡನ್ ಪ್ರದೇಶದ ಹೋಟೆಲ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಒಬ್ಬ ವ್ಯಕ್ತಿಯನ್ನು ಮತ್ತು ಟಿಟಿ ನಗರ ಪ್ರದೇಶದ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಿದ ಇತರ ಮೂವರು ಆರೋಪಿಗಳನ್ನು ದಿಂಡೋರಿ ಜಿಲ್ಲೆಯಲ್ಲಿ ಮಂಗಳವಾರ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಹರ್ಯಾಣದ ಪಲ್ವಾಲ್ ಜಿಲ್ಲೆಯ ನಿವಾಸಿಯಾದ 16 ವರ್ಷದ ಬಾಲಕಿ ಆಗಸ್ಟ್ 13 ರಂದು ಕುಟುಂಬದವರು ಗದರಿಸಿದ್ದರಿಂದ ಮನೆಯಿಂದ ಪರಾರಿಯಾಗಿದ್ದಳು. ಆಕೆ ಆಗ್ರಾ ರೈಲನ್ನು ಹತ್ತಿದಳು, ಅಲ್ಲಿ ಆಕೆ ಇಬ್ಬರು ಮಹಿಳೆಯರಾದ ಸೀಮಾ ಮತ್ತು ಪಾರುಲ್(ಇಬ್ಬರೂ ಭೋಪಾಲ್ ನಿವಾಸಿಗಳು) ಅವರನ್ನು ಭೇಟಿಯಾದಳು. ಅವರಿಗೆ ಕೆಲಸ ಹುಡುಕಿಕೊಂಡು ಮುಂಬೈಗೆ ಹೋಗುತ್ತಿದ್ದೇನೆ ಎಂದು ಹುಡುಗಿ ಹೇಳಿದಾಗ, ಇಬ್ಬರು ಮಹಿಳೆಯರು ಭೋಪಾಲ್‌ನಲ್ಲಿ ತನಗಾಗಿ ಉತ್ತಮ ಉದ್ಯೋಗವನ್ನು ಒದಗಿಸುವುದಾಗಿ ಭರವಸೆ ನೀಡಿದರು, ನಂತರ ಅವರೊಂದಿಗೆ ಭೋಪಾಲ್‌ಗೆ ಕರೆದುಕೊಂಡು ಹೋದರು.

ಆದರೆ ಹರಿಯಾಣದ ಹುಡುಗಿಗೆ ಭೋಪಾಲ್ ನಲ್ಲಿ ಕೆಲಸ ಕೊಡಿಸುವ ಬದಲು, ಇಬ್ಬರು ಮಹಿಳೆಯರು ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಿದರು ಎಂದು ಭಡೋರಿಯಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT