ಸಂಗ್ರಹ ಚಿತ್ರ 
ದೇಶ

ಕೇರಳದಲ್ಲಿ 'ನಿಫಾ' ವೈರಸ್: ಬಾಲಕನ ಸಂಪರ್ಕಕ್ಕೆ ಬಂದಿದ್ದವರು ಸೇಫ್, 20 ಮಂದಿ ರಿಪೋರ್ಟ್ ನೆಗೆಟಿವ್!

ಕೇರಳದಲ್ಲಿ ಭಾನುವಾರ ನಿಫಾ ವೈರಸ್'ಗೆ ಬಲಿಯಾದ 12 ವರ್ಷದ ಬಾಲಕನ ಸಂಪರ್ಕಕ್ಕೆ ಬಂದಿದ್ದವರ ಪೈಕಿ ಯಾರಲ್ಲೂ ನಿಫಾ ವೈರಸ್ ಪತ್ತೆಯಾಗಿಲ್ಲ ಎಂಬುದು ಇದೀಗ ದೃಢಪಟ್ಟಿದೆ.

ಕೋಳಿಕೋಡ್: ಕೇರಳದಲ್ಲಿ ಭಾನುವಾರ ನಿಫಾ ವೈರಸ್'ಗೆ ಬಲಿಯಾದ 12 ವರ್ಷದ ಬಾಲಕನ ಸಂಪರ್ಕಕ್ಕೆ ಬಂದಿದ್ದವರ ಪೈಕಿ ಯಾರಲ್ಲೂ ನಿಫಾ ವೈರಸ್ ಪತ್ತೆಯಾಗಿಲ್ಲ ಎಂಬುದು ಇದೀಗ ದೃಢಪಟ್ಟಿದೆ. 

ಬಾಲಕನ ಸಂಪರ್ಕಕ್ಕೆ ಬಂದಿದ್ದ 30 ಮಂದಿಯ ಮಾದರಿ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ 20 ಮಂದಿ ವರದಿಗಳು ನೆಗೆಟಿವ್ ಆಗಿವೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ. 

20 ಮಾದರಿಗಳಲ್ಲಿ 15 ಪುಣೆಯಲ್ಲಿ ಮತ್ತು ಕೋಯಿಕ್ಕೋಡ್ 5 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇಲ್ಲಿಯವರೆಗೆ ಸುಮಾರು 30 ಮಂದಿಯನ್ನು ಪರೀಕ್ಷೆ ಒಳಪಡಿಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಆಗಿದೆ. ಪ್ರಸ್ತುತ ಕೋಳಿಕೋಡ್​ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ನಿಫಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಸುಮಾರು 68 ಮಂದಿಯನ್ನು ಪ್ರತ್ಯೇಕವಾಗಿ ಇಡಲಾಗಿದೆ. ಅವರ ಆರೋಗ್ಯವನ್ನು 42 ದಿನಗಳ ಕಾಲ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ನಿಫಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ನಿಫಾ ಹರಡಿರುವ ಪ್ರದೇಶದ ಪ್ರಾಣಿಗಳಿಂದ ಮಾದರಿ ಸಂಗ್ರಹಿಸಲು ತಜ್ಞರ ತಂಡದೊಂದಿಗೆ, ರಾಜ್ಯದ ಆರೋಗ್ಯ ಇಲಾಖೆಯು ಸಮನ್ವಯ ಸಾಧಿಸಲಿದೆ ಎಂದು ಹೇಳಿದ್ದಾರೆ. 

ಭಾನುವಾರ ಮುಂಜಾನೆ 12 ವರ್ಷದ ಬಾಲಕ ನಿಫಾ ಸೋಂಕಿನಿಂದ ಸಾವನ್ನಪ್ಪಿದ್ದ. ಆತ ನಿಫಾ ವೈರಸ್​​ನಿಂದ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯಕೀಯ ಮೂಲಗಳು ದೃಢೀಕರಿಸಿದ ನಂತರ ಕೋಯಿಕ್ಕೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಯಿತು. ಸೋಂಕು ಬೇರೆಡೆ ಹರಡದಂತೆ ತಡೆಯಲು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದರು.

ಮೃತ ಬಾಲಕನ ಮನೆಯ ಸುತ್ತಲೂ ಸುಮಾರು ಮೂರು ಕಿಲೋಮೀಟರ್ ದೂರದವರೆಗೆ ನಿರ್ಬಂಧ ವಿಧಿಸಲಾಯಿತು. ಚತಮಂಗಲಂ ಪಂಚಾಯಿತಿಯ ಪಜೂರು (ವಾರ್ಡ್ -9)ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್​​ನ ತಂಡ ಹುಡುಗನ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT