ಸುಪ್ರೀಂ ಕೋರ್ಟ್ 
ದೇಶ

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು

12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

ನವದೆಹಲಿ: 12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿ ಆದೇಶ ಹೊರಡಿಸಿದೆ.

ಸಿಜೆಐ ಎನ್ ವಿ ರಮಣ ಅವರ ನೇತೃತ್ವದ ಕೊಲಿಜಿಯಂ ಈ ಆದೇಶವನ್ನು ಹೊರಡಿಸಿದೆ. ನ್ಯಾಯಾಧೀಶರಾದ ಯುಯು ಲಲಿತ್ ಹಾಗೂ ಎಎಂ ಖಾನ್ವಾಲಿಕರ್ ಅವರೂ ಕೊಲಿಜಿಯಂ ಸದಸ್ಯರಾಗಿದ್ದು  ಕೇರಳ ಹೈಕೋರ್ಟ್ ಗೆ ಇಬ್ಬರು ಹೆಚ್ಚುವರಿ ನ್ಯಾಯಾಧೀಶರ-ನ್ಯಾ.ಎಂಆರ್ ಅನಿತಾ, ನ್ಯಾ.ಕೆ.ನಾಯರ್ ಹರಿಪಾಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಕೇಂದ್ರಕ್ಕೆ ಕಳಿಸಲಾಗಿರುವ ಶಿಫಾರಸ್ಸಿನಲ್ಲಿ ಮೂರು ಪ್ರತ್ಯೇಕ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ಈ ಶಿಫಾರಸ್ಸನ್ನು ಒಪ್ಪಿಕೊಂಡ ಬಳಿಕ ಕರ್ನಾಟಕದ ಹೈಕೋರ್ಟ್ ಗೆ 10 ನ್ಯಾಯಾಧೀಶರ ಖಾಯಂ ನೇಮಕಗೊಳ್ಳಲಿದ್ದಾರೆ.

ನ್ಯಾಯಾಧೀಶರ ಪಟ್ಟಿ ಹೀಗಿದೆ...

1. ನ್ಯಾ.ಎಂ.ಗಣೇಶಯ್ಯ ಉಮಾ
2. ನ್ಯಾಯಾಧೀಶ ಶಿವಶಂಕರ್​ ಅಮರಣ್ಣವರ್​
3. ನ್ಯಾ.ಮರಲೂರ್​ ಇಂದ್ರಕುಮಾರ್ ಅರುಣ್​
4. ಜಸ್ಟೀಸ್​ ಹಂಚಾಟೆ ಸಂಜೀವ್​ಕುಮಾರ್​
5. ಜಸ್ಟೀಸ್​ ವೇದವ್ಯಾಸಾಚಾರ್​ ಶ್ರೀಶಾನಂದಾ
6. ನ್ಯಾ.ಪದ್ಮರಾಜ್​ ನೇಮಾಚಂದ್ರ ದೇಸಾಯಿ
7. ನ್ಯಾ.ರವಿ ವೆಂಕಪ್ಪ ಹೊಸ್ಮನಿ
8.ನ್ಯಾ. ಸವಣೂರ್​ ವಿಶ್ವಜಿತ್ ಶೆಟ್ಟಿ
9. ಜಸ್ಟೀಸ್ ಪಿ.ಕೃಷ್ಣ ಭಟ್​
10. ಜಸ್ಟೀಸ್​ ಎಂಗಲಗುಪ್ಪೆ ಸೀತಾರಾಮಯ್ಯ ಇಂದಿರೇಶ್​

ತುರ್ತಾಗಿ ಹೈಕೋರ್ಟ್ ಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಸ್ಥಾನವನ್ನು ತುಂಬುವುದಕ್ಕಾಗಿ ಸುಪ್ರೀಂ ಕೋರ್ಟ್ ಈ ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT