ನದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್'ಡಿಆರ್'ಎಫ್ ಪಡೆ 
ದೇಶ

ಅಸ್ಸಾಂ ದೋಣಿ ದುರಂತ: ಬ್ರಹ್ಮಪುತ್ರ ನದಿಯಲ್ಲಿ ಮುಂದುವರೆದ ಕಾರ್ಯಾಚರಣೆ, ರಾಷ್ಟ್ರಪತಿ ಕೋವಿಂದ್ ಸಂತಾಪ

ಭೀಕರ ಮಳೆ, ಪ್ರವಾಹ, ಗುಡ್ಡ ಕುಸಿತದಿಂದ ದೇಶ ಈಗಾಗಲೇ ನಲುಗುತ್ತಿದ್ದು. ಇದರ ನಡುವೆ ಇದೀಗ ಅಸ್ಸಾಂನಲ್ಲಿ ದೋಣಿ ದುರಂತ ಸಂಭವಿಸಿದೆ. ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ನಾಪತ್ತೆಯಾಗಿದ್ದು, ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

ಗುವಾಹಟಿ: ಭೀಕರ ಮಳೆ, ಪ್ರವಾಹ, ಗುಡ್ಡ ಕುಸಿತದಿಂದ ದೇಶ ಈಗಾಗಲೇ ನಲುಗುತ್ತಿದ್ದು. ಇದರ ನಡುವೆ ಇದೀಗ ಅಸ್ಸಾಂನಲ್ಲಿ ದೋಣಿ ದುರಂತ ಸಂಭವಿಸಿದೆ. ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ನಾಪತ್ತೆಯಾಗಿದ್ದು, ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

ನಿನ್ನೆ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದ್ದು, ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೋಣಿ ಮುಳುಗಿದೆ.

ಮೂಲಗಳ ಪ್ರಕಾರ ಈ ವರೆಗೆ ಓರ್ವ ಮಹಿಳೆಯೊಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಹಲವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ. 

ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದದ್ದಾರೆ. 

ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ಇದೀಗ ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ನದಿಯಲ್ಲಿ ಎನ್'ಡಿಆರ್'ಎಫ್ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ. 

ರಾಷ್ಟ್ರಪತಿ ಕೋವಿಂದ್ ಸಂತಾಪ
ಈ ನಡುವೆ ದುರ್ಘಟನೆ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಅಸ್ಸಾಂನ ಜೋರ್ಹತ್ ನಲ್ಲಿ ನಡೆದ ದೋಣಿ ದುರಂತದಲ್ಲಿ ಸಂಭವಿಸಿರುವ ಜೀವಹಾನಿಯಾದ ಬಗ್ಗೆ ಕೇಳಿ ತುಂಬಾ ನೋವಾಯಿತು. ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ. ಜೀವಗಳ ಉಳಿಸುವ ಸಲುವಾಗಿ ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ ಎಂದು ಹೇಳಿದ್ದಾರೆ. 

ಇದರಂತೆ ಘಟನೆ ಬಗ್ಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕೂಡ ಆಘಾತ ವ್ಯಕ್ತಪಡಿಸಿದ್ದು, ತ್ವರಿತಗತಿಯ ಸಕಲ ರಕ್ಷಣಾ ಕಾರ್ಯಕ್ಕೆ ಸೂಚಿಸಿದ್ದಾರೆ ಹಾಗೂ ನೆರವಿನ ಭರವಸೆಯನ್ನೂ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT