ಭಾರತೀಯ ವಾಯುಪಡೆ ವಿಮಾನಗಳು 
ದೇಶ

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ

ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಬಾರ್ಮರ್: ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಬರ್ಮಾರ್ ನ ಗಾಂಧವ್ ಭಕಾಸರ್ ವಿಭಾಗದ ರಾಷ್ಟ್ರೀಯ ಹೆದ್ದಾರಿ ಭಾರತೀಯ ವಾಯುಪಡೆ ವಿಮಾನಗಳ ಭೂ ಸ್ಪರ್ಶಕ್ಕಾಗಿ ಬಳಸುತ್ತಿರುವ ಭಾರತದ ಮೊದಲ ರಾಷ್ಟ್ರೀಯ ಹೆದ್ದಾರಿಯಾಗಿದೆ. 

ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ, ಬಿಪಿನ್ ರಾವತ್ ಅವರನ್ನು ಹೊತ್ತ ಭಾರತೀಯ ವಾಯುಪಡೆಯ ಎ ಹರ್ಕ್ಯುಲಸ್ ಸಿ-130ಜೆ ವಿಮಾನ ಗುರುವಾರ ಈ ಹೆದ್ದಾರಿಯಲ್ಲಿ ಅಣುಕು ತುರ್ತು ಭೂಸ್ಪರ್ಶ ಮಾಡಿತು. 

ಸುಖೋಯ್ -30 ಎಂಕೆಐ ಫೈಟರ್‌ನಿಂದ ಆರಂಭಿಸಿ ಅನೇಕ ಲ್ಯಾಂಡಿಂಗ್ ಮತ್ತು ಟಚ್‌ಡೌನ್ ಕಾರ್ಯಾಚರಣೆಗಳನ್ನು ನಡೆಸಲಾಯಿತು. ಎಎನ್-32 ಮಿಲಿಟರಿ ಸಾರಿಗೆ ವಿಮಾನ ಮತ್ತು ಐಎಎಫ್ ನ ಎಂಐ-17v5 ಹೆಲಿಕಾಪ್ಟರ್ ಸಹ ಇಎಲ್ಎಫ್ ನಲ್ಲಿ ಇಳಿಯಿತು. ಇದು ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ತನ್ನ ಸಂಪೂರ್ಣ ಕಾರ್ಯಾಚರಣೆಯ ಸಿದ್ಧತೆಯನ್ನು ತೋರಿಸುತ್ತದೆ.

ಭಾರತೀಯ ವಾಯುಪಡೆಗೆ ತುರ್ತು ಭೂಸ್ಪರ್ಶದ ಸೌಲಭ್ಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ 925ರ ಸತ್ತಾ-ಗಾಂಧವ್ ಸ್ಟ್ರೆಚ್ ನಲ್ಲಿ 3 ಕಿ.ಮೀ ರಸ್ತೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT