ಭಾರತೀಯ ವಾಯುಪಡೆ ವಿಮಾನಗಳು 
ದೇಶ

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ

ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಬಾರ್ಮರ್: ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಬರ್ಮಾರ್ ನ ಗಾಂಧವ್ ಭಕಾಸರ್ ವಿಭಾಗದ ರಾಷ್ಟ್ರೀಯ ಹೆದ್ದಾರಿ ಭಾರತೀಯ ವಾಯುಪಡೆ ವಿಮಾನಗಳ ಭೂ ಸ್ಪರ್ಶಕ್ಕಾಗಿ ಬಳಸುತ್ತಿರುವ ಭಾರತದ ಮೊದಲ ರಾಷ್ಟ್ರೀಯ ಹೆದ್ದಾರಿಯಾಗಿದೆ. 

ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ, ಬಿಪಿನ್ ರಾವತ್ ಅವರನ್ನು ಹೊತ್ತ ಭಾರತೀಯ ವಾಯುಪಡೆಯ ಎ ಹರ್ಕ್ಯುಲಸ್ ಸಿ-130ಜೆ ವಿಮಾನ ಗುರುವಾರ ಈ ಹೆದ್ದಾರಿಯಲ್ಲಿ ಅಣುಕು ತುರ್ತು ಭೂಸ್ಪರ್ಶ ಮಾಡಿತು. 

ಸುಖೋಯ್ -30 ಎಂಕೆಐ ಫೈಟರ್‌ನಿಂದ ಆರಂಭಿಸಿ ಅನೇಕ ಲ್ಯಾಂಡಿಂಗ್ ಮತ್ತು ಟಚ್‌ಡೌನ್ ಕಾರ್ಯಾಚರಣೆಗಳನ್ನು ನಡೆಸಲಾಯಿತು. ಎಎನ್-32 ಮಿಲಿಟರಿ ಸಾರಿಗೆ ವಿಮಾನ ಮತ್ತು ಐಎಎಫ್ ನ ಎಂಐ-17v5 ಹೆಲಿಕಾಪ್ಟರ್ ಸಹ ಇಎಲ್ಎಫ್ ನಲ್ಲಿ ಇಳಿಯಿತು. ಇದು ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ತನ್ನ ಸಂಪೂರ್ಣ ಕಾರ್ಯಾಚರಣೆಯ ಸಿದ್ಧತೆಯನ್ನು ತೋರಿಸುತ್ತದೆ.

ಭಾರತೀಯ ವಾಯುಪಡೆಗೆ ತುರ್ತು ಭೂಸ್ಪರ್ಶದ ಸೌಲಭ್ಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ 925ರ ಸತ್ತಾ-ಗಾಂಧವ್ ಸ್ಟ್ರೆಚ್ ನಲ್ಲಿ 3 ಕಿ.ಮೀ ರಸ್ತೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT