ಪ್ರಧಾನಿ ಮೋದಿ 
ದೇಶ

ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಹೆಚ್ಚು ಪ್ರಭಾವಿಯಾಗುವಂತೆ ನೋಡಿಕೊಳ್ಳಬೇಕು: ಪ್ರಧಾನಿ ಮೋದಿ

ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐದು ರಾಷ್ಟ್ರಗಳ ಶೃಂಗಸಭೆಯಲ್ಲಿ ಹೇಳಿದ್ದಾರೆ.

ನವದೆಹಲಿ: ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐದು ರಾಷ್ಟ್ರಗಳ ಶೃಂಗಸಭೆಯಲ್ಲಿ ಹೇಳಿದ್ದಾರೆ.

ಬ್ರಿಕ್ಸ್ ವಾರ್ಷಿಕ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ವರ್ಚುವಲ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ,  ಐದು ರಾಷ್ಟ್ರಗಳು ಬ್ರಿಕ್ಸ್ ಭಯೋತ್ಪಾದನಾ ನಿಗ್ರಹ ಯೋಜನೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಿವೆ. ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ಈ ಪ್ರದೇಶವು ಹಲವಾರು ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ ಎಂದರು. 

ಬ್ರಿಕ್ಸ್ ಸಮಾವೇಶದಲ್ಲಿ ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್ ಪಾಲ್ಗೊಂಡಿದ್ದವು.

ಕಳೆದ 13 ವರ್ಷಗಳಲ್ಲಿ ಬ್ರಿಕ್ಸ್​ ಮಾಡಿರುವ ಹಲವು ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಪ್ರಗತಿಶೀಲ ಆರ್ಥಿಕತೆಯ ಪ್ರಭಾವಿ ಧ್ವನಿಗಳಾಗಿರುವ ನಾವು ಅಭಿವೃದ್ಧಿಶೀಲ ದೇಶಗಳಿಗಾಗಿ ವೇದಿಕೆಯೊಂದನ್ನು ರೂಪಿಸಿದ್ದೇವೆ ಎಂದರು.

ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್​ ಇನ್ನಷ್ಟು ಪ್ರಭಾವಿಯಾಗುವಂತೆ ಮಾಡಲು ನಾವೆಲ್ಲರೂ ಗಮನಹರಿಸಬೇಕು. ಬ್ರಿಕ್ಸ್​ನ ಅಧ್ಯಕ್ಷತೆಯ ಗೌರವಕ್ಕೆ ಪಾತ್ರವಾಗಿರುವ ಭಾರತವು ಸತತ ಪ್ರಗತಿ, ಸಹಯೋಗ ಮತ್ತು ಸಹಮತದ ಆಶಯವನ್ನು ಮುಂದಿಟ್ಟಿದೆ ಎಂದು ಮೋದಿ ಹೇಳಿದರು.

ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಸಹಕಾರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಕ್ಸ್​ ಶೃಂಗಸಭೆ ಅಧ್ಯಕ್ಷತೆಯ ಗೌರವ 2ನೇ ಬಾರಿಗೆ ಒಲಿದಿದೆ. 2016ರಲ್ಲಿ ಗೋವಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ 'ಇರಾನ್ ದಾಳಿ' ಬೆದರಿಕೆ: ಕತಾರ್‌ನ ಅಮೆರಿಕ ಸೇನಾ ನೆಲೆಯಿಂದ ಕೆಲವು ಸಿಬ್ಬಂದಿ ಸ್ಥಳಾಂತರ!

T20 World Cup: ಪಾಕ್ ಮೂಲದ ನಾಲ್ವರು ಆಟಗಾರರಿಗೆ ಭಾರತದಿಂದ 'ವೀಸಾ' ನಿರಾಕರಣೆ, ಮೌನ ಮುರಿದ USA ಕ್ರಿಕೆಟ್!

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

ರಾಜ್‌ಕೋಟ್​ ಪಂದ್ಯ: ಬೌಲರ್ ಗಳ ಬೆಂಡೆತ್ತಿದ ಕೀವಿಸ್ ಪಡೆ; ಭಾರತಕ್ಕೆ ಹೀನಾಯ ಸೋಲು!

ಶಬರಿಮಲೆ ಚಿನ್ನ ಕಳವು ಪ್ರಕರಣ: TDB ಮಾಜಿ ಸದಸ್ಯ ಶಂಕರ್ ದಾಸ್ ಬಂಧನ!

SCROLL FOR NEXT