ಛತ್ತೀಸ್ ಗಢ ಸಿಎಂ 
ದೇಶ

ಬ್ರಾಹ್ಮಣ ವಿರೋಧಿ ಹೇಳಿಕೆ ಪ್ರಕರಣ: ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ತಂದೆಗೆ ಜಾಮೀನು

ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ, 86 ವರ್ಷದ ನಂದ ಕುಮಾರ್...

ರಾಯ್‌ ಪುರ್‌: ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ, 86 ವರ್ಷದ ನಂದ ಕುಮಾರ್ ಬಘೇಲ್ ಅವರಿಗೆ ರಾಯಪುರ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಕಳೆದ ಸೆಪ್ಟೆಂಬರ್ 7ರಂದು ಭೂಪೇಶ್ ಬಘೇಲ್‌ ಅವರ ತಂದೆ ನಂದ್ ಕುಮಾರ್ ಬಘೇಲ್ ಅವರನ್ನು ಬಂಧಿಸಿದ ಪೊಲೀಸರು ರಾಯಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರನ್ನು ಸೆಪ್ಟೆಂಬರ್ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಬಳಿಕ ನಂದ್ ಕುಮಾರ್ ಪರ ವಕೀಲರು ಜಾಮೀನು ಕೋರಿ ರಾಯಪುರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗೆ ಜಾಮೀನು ನೀಡಿದೆ.

ನಂದ ಕುಮಾರ್ ಬಘೇಲ್‌ ಕೆಲವು ದಿನಗಳ ಹಿಂದೆ ರಾಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬ್ರಾಹ್ಮಣರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬ್ರಾಹ್ಮಣರು ವಿದೇಶಿಯರು, ಅವರನ್ನು ಗ್ರಾಮಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳುವಂತೆ ಜನತೆಗೆ ಕರೆ ನೀಡಿದ್ದರು. ದೇಶದ ಎಲ್ಲ ಗ್ರಾಮೀಣ ಜನರಿಗೆ ನನ್ನ ಕೋರಿಕೆ ಇಷ್ಟೆ . ಬ್ರಾಹ್ಮಣರು ನಿಮ್ಮ ಗ್ರಾಮಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ನಂದ ಕುಮಾರ್ ಬಘೇಲ್‌ ಮನವಿ ಮಾಡಿದ್ದರು. ಇತರ ಸಮಾಜದ ಜನರೊಂದಿಗೆ ತಾವು ಈ ವಿಷಯವಾಗಿ ಮಾತನಾಡುವುದಾಗಿ. ಎಲ್ಲರೂ ಒಗ್ಗೂಡಿ ಬ್ರಾಹ್ಮಣರನ್ನು ಗ್ರಾಮಗಳಿಂದ ಬಹಿಷ್ಕರಿಸೋಣ ಎಂದು ಕರೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT