ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಜ್ಯಸಭೆಯಲ್ಲಿ ಹಿಂಸಾಚಾರ:  ತನಿಖಾ ಸಮಿತಿ ಸೇರಲು ಕಾಂಗ್ರೆಸ್ ತಿರಸ್ಕಾರ

ಆಗಸ್ಟ್ 11 ರಂದು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಂಭವಿಸಿದ್ದ ಹಿಂಸಾಚಾರ ಘಟನೆ ಕುರಿತ ತನಿಖೆಗೆ ಉದ್ದೇಶಿಸಲಾಗಿರುವ ತನಿಖಾ ಸಮಿತಿಯ ಭಾಗವಾಗಲು ಕಾಂಗ್ರೆಸ್ ತಿರಸ್ಕರಿಸಿದೆ.

ನವದೆಹಲಿ: ಆಗಸ್ಟ್ 11 ರಂದು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಂಭವಿಸಿದ್ದ ಹಿಂಸಾಚಾರ ಘಟನೆ ಕುರಿತ ತನಿಖೆಗೆ ಉದ್ದೇಶಿಸಲಾಗಿರುವ ತನಿಖಾ ಸಮಿತಿಯ ಭಾಗವಾಗಲು ಕಾಂಗ್ರೆಸ್ ತಿರಸ್ಕರಿಸಿದೆ.

ಈ ಸಂಬಂಧ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಆಗಸ್ಟ್ 11, 2021 ರ ಘಟನೆಗಳ ಕುರಿತು ತನಿಖಾ ಸಮಿತಿ ರಚಿಸುವುದು,  ಸಂಸದರನ್ನು ಬೆದರಿಸಲು ಮೌನವಾಗಿ ವಿನ್ಯಾಸಗೊಳಿಸಿದಂತೆ ತೋರುತ್ತದೆ. ಇದು ಜನಪ್ರತಿನಿಧಿಗಳ ಧ್ವನಿಯನ್ನು ನಿಗ್ರಹಿಸುವುದಲ್ಲದೆ ಸರ್ಕಾರಕ್ಕೆ ಅನಾನುಕೂಲವಾಗಿರುವ ಎಲ್ಲವನ್ನು ಉದ್ದೇಶಪೂರ್ವಕವಾಗಿ ದೂರವಿಡುತ್ತದೆ ಎಂದು ಹೇಳಿದ್ದಾರೆ.

ಆದ್ದರಿಂದ, ನಾನು ನಿಸ್ಸಂದಿಗ್ಧವಾಗಿ ವಿಚಾರಣಾ ಸಮಿತಿ ರಚನೆಯನ್ನು ವಿರೋಧಿಸುತ್ತೇವೆ ಮತ್ತು  ಈ ಸಮಿತಿಯ ನಾಮ ನಿರ್ದೇಶನಕ್ಕಾಗಿ ಪಕ್ಷದಿಂದ ಸದಸ್ಯರ ಹೆಸರನ್ನು ಪ್ರಸ್ತಾಪಿಸುವ  ಪ್ರಶ್ನೆಯು ಉದ್ಭವಿಸುವುದಿಲ್ಲ  ಎಂದು ಅವರು ತಿಳಿಸಿದರು.

ಚರ್ಚೆಯಲ್ಲಿ ಪಾಲ್ಗೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಉತ್ಸುಕವಾಗಿದೆ ಮತ್ತ ಅಧಿವೇಶನವನ್ನು ಸುಗಮವಾಗಿ ನಡೆಸಿಕೊಂಡು ಹೋಗುವಲ್ಲಿ ಸರ್ಕಾರವೇ ಅಡ್ಡಿಯಾಗಿದೆ. ದೇಶದ ಆರ್ಥಿಕತೆ, ರೈತರ ಪ್ರತಿಭಟನೆ, ಹಣದುಬ್ಬರ, ತೈಲ ಬೆಳೆ ಏರಿಕೆ,ನಿರುದ್ಯೋಗ
ಮತ್ತಿತರ ಅನೇಕ ವಿಷಯಗಳ ಕುರಿತ ಚರ್ಚೆಗೆ ಕಾಂಗ್ರೆಸ್ ನೋಟಿಸ್ ನೀಡಿದರೂ, ತಮ್ಮ ಬೇಡಿಕೆಯನ್ನು ಸರ್ಕಾರ ಪರಿಗಣಿಸಲೇ ಇಲ್ಲ. ಚರ್ಚೆ ಇಲ್ಲದೇ ಅನೇಕ ಬಿಲ್ ಗಳು, ನೀತಿಗಳನ್ನು ಅಂಗೀಕರಿಸಲಾಗಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಈ ಸಂಬಂಧ ಇತರ ಪ್ರತಿಪಕ್ಷಗಳ ಜೊತೆಗೆ ಮಾತನಾಡಿದ್ದು, ಬಹುತೇಕ ಎಲ್ಲಾ ಪಕ್ಷಗಳು ಉದ್ದೇಶಿಕಿ ತನಿಖಾ ಸಮಿತಿ ರಚನೆಯನ್ನು ತಿರಸ್ಕರಿಸಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!