ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಜ್ಯಸಭೆಯಲ್ಲಿ ಹಿಂಸಾಚಾರ:  ತನಿಖಾ ಸಮಿತಿ ಸೇರಲು ಕಾಂಗ್ರೆಸ್ ತಿರಸ್ಕಾರ

ಆಗಸ್ಟ್ 11 ರಂದು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಂಭವಿಸಿದ್ದ ಹಿಂಸಾಚಾರ ಘಟನೆ ಕುರಿತ ತನಿಖೆಗೆ ಉದ್ದೇಶಿಸಲಾಗಿರುವ ತನಿಖಾ ಸಮಿತಿಯ ಭಾಗವಾಗಲು ಕಾಂಗ್ರೆಸ್ ತಿರಸ್ಕರಿಸಿದೆ.

ನವದೆಹಲಿ: ಆಗಸ್ಟ್ 11 ರಂದು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಂಭವಿಸಿದ್ದ ಹಿಂಸಾಚಾರ ಘಟನೆ ಕುರಿತ ತನಿಖೆಗೆ ಉದ್ದೇಶಿಸಲಾಗಿರುವ ತನಿಖಾ ಸಮಿತಿಯ ಭಾಗವಾಗಲು ಕಾಂಗ್ರೆಸ್ ತಿರಸ್ಕರಿಸಿದೆ.

ಈ ಸಂಬಂಧ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಆಗಸ್ಟ್ 11, 2021 ರ ಘಟನೆಗಳ ಕುರಿತು ತನಿಖಾ ಸಮಿತಿ ರಚಿಸುವುದು,  ಸಂಸದರನ್ನು ಬೆದರಿಸಲು ಮೌನವಾಗಿ ವಿನ್ಯಾಸಗೊಳಿಸಿದಂತೆ ತೋರುತ್ತದೆ. ಇದು ಜನಪ್ರತಿನಿಧಿಗಳ ಧ್ವನಿಯನ್ನು ನಿಗ್ರಹಿಸುವುದಲ್ಲದೆ ಸರ್ಕಾರಕ್ಕೆ ಅನಾನುಕೂಲವಾಗಿರುವ ಎಲ್ಲವನ್ನು ಉದ್ದೇಶಪೂರ್ವಕವಾಗಿ ದೂರವಿಡುತ್ತದೆ ಎಂದು ಹೇಳಿದ್ದಾರೆ.

ಆದ್ದರಿಂದ, ನಾನು ನಿಸ್ಸಂದಿಗ್ಧವಾಗಿ ವಿಚಾರಣಾ ಸಮಿತಿ ರಚನೆಯನ್ನು ವಿರೋಧಿಸುತ್ತೇವೆ ಮತ್ತು  ಈ ಸಮಿತಿಯ ನಾಮ ನಿರ್ದೇಶನಕ್ಕಾಗಿ ಪಕ್ಷದಿಂದ ಸದಸ್ಯರ ಹೆಸರನ್ನು ಪ್ರಸ್ತಾಪಿಸುವ  ಪ್ರಶ್ನೆಯು ಉದ್ಭವಿಸುವುದಿಲ್ಲ  ಎಂದು ಅವರು ತಿಳಿಸಿದರು.

ಚರ್ಚೆಯಲ್ಲಿ ಪಾಲ್ಗೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಉತ್ಸುಕವಾಗಿದೆ ಮತ್ತ ಅಧಿವೇಶನವನ್ನು ಸುಗಮವಾಗಿ ನಡೆಸಿಕೊಂಡು ಹೋಗುವಲ್ಲಿ ಸರ್ಕಾರವೇ ಅಡ್ಡಿಯಾಗಿದೆ. ದೇಶದ ಆರ್ಥಿಕತೆ, ರೈತರ ಪ್ರತಿಭಟನೆ, ಹಣದುಬ್ಬರ, ತೈಲ ಬೆಳೆ ಏರಿಕೆ,ನಿರುದ್ಯೋಗ
ಮತ್ತಿತರ ಅನೇಕ ವಿಷಯಗಳ ಕುರಿತ ಚರ್ಚೆಗೆ ಕಾಂಗ್ರೆಸ್ ನೋಟಿಸ್ ನೀಡಿದರೂ, ತಮ್ಮ ಬೇಡಿಕೆಯನ್ನು ಸರ್ಕಾರ ಪರಿಗಣಿಸಲೇ ಇಲ್ಲ. ಚರ್ಚೆ ಇಲ್ಲದೇ ಅನೇಕ ಬಿಲ್ ಗಳು, ನೀತಿಗಳನ್ನು ಅಂಗೀಕರಿಸಲಾಗಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಈ ಸಂಬಂಧ ಇತರ ಪ್ರತಿಪಕ್ಷಗಳ ಜೊತೆಗೆ ಮಾತನಾಡಿದ್ದು, ಬಹುತೇಕ ಎಲ್ಲಾ ಪಕ್ಷಗಳು ಉದ್ದೇಶಿಕಿ ತನಿಖಾ ಸಮಿತಿ ರಚನೆಯನ್ನು ತಿರಸ್ಕರಿಸಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

SCROLL FOR NEXT