ಕೋವಿಡ್-19 ಲಸಿಕೆ ಪಡೆದುಕೊಳ್ಳುತ್ತಿರುವವರು 
ದೇಶ

ಪೂರ್ಣ ಲಸಿಕೆ ಪಡೆದರೂ ದೇಶಾದ್ಯಂತ 4 ತಿಂಗಳಲ್ಲಿ 5 ಕೋವಿಡ್ ಸಾವು: ಕೇಂದ್ರ

ಎರಡೂ ಡೋಸ್ ಗಳ ಲಸಿಕೆ ಪಡೆದ ಹೊರತಾಗಿಯೂ ಕೋವಿಡ್-19 ನ ಕಾರಣದಿಂದಾಗಿ ಸಾವನ್ನಪ್ಪಿರುವ ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರ ಬಹಿರಂಗಗೊಳಿಸಿದೆ.

ನವದೆಹಲಿ: ಎರಡೂ ಡೋಸ್ ಗಳ ಲಸಿಕೆ ಪಡೆದ ಹೊರತಾಗಿಯೂ ಕೋವಿಡ್-19 ನ ಕಾರಣದಿಂದಾಗಿ ಸಾವನ್ನಪ್ಪಿರುವ ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರ ಬಹಿರಂಗಗೊಳಿಸಿದೆ. 

ಪೂರ್ಣ ಪ್ರಮಾಣದ ಲಸಿಕೆ ಪಡೆದರೂ 4 ತಿಂಗಳ ಅವಧಿಯಲ್ಲಿ 5 ಮಂದಿ ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ಆರ್ ಟಿಐಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

ಇದೇ ಅವಧಿಯಲ್ಲಿ ನಾಲ್ಕು ಮಂದಿ, ಲಸಿಕೆ ಪಡೆದ ನಂತರದ ಪರಿಣಾಮಗಳಿಗಾಗಿ (ಎಇಎಫ್ಐ) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರ್ ಟಿಐ ಗೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಜಿಲ್ಲೆಗಳಿಂದ ಬಂದ ವರದಿಯ ಆಧಾರದಲ್ಲಿ ಎಇಎಫ್ಐ ಗೆ ನಾಲ್ವರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಆದರೆ ಲಸಿಕೆ ವಿಭಾಗ ಡೇಟಾ ಸಂಗ್ರಹಣೆ ಮಾಡಿಲ್ಲ. ಆದ್ದರಿಂದ ಆರೋಗ್ಯ ವಿಭಾಗದ ಕಾರ್ಯಕರ್ತರಿಗೆ ಲಸಿಕೆ ಪಡೆದ ಬಳಿಕ ಮತ್ತೊಮ್ಮೆ ಕೋವಿಡ್-19 ಸೋಂಕು ತಗುಲಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಮಾಹಿತಿಯಲ್ಲಿ ತಿಳಿಸಿದ್ೆ

ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಡೇಟಾ ವಿಶ್ಲೇಷಣೆಯಲ್ಲಿ ಒಂದು ಡೋಸ್ ಲಸಿಕೆ ಕೋವಿಡ್-19 ನಿಂದ ಉಂಟಾಗುವ ಸಾವುಗಳನ್ನು ತಡೆಯುವುದಕ್ಕೆ ಶೇ.96.6 ರಷ್ಟು ಪರಿಣಾಮಕಾರಿಯಾಗಿದ್ದು, ಎರಡೂ ಡೋಸ್ ಗಳನ್ನು ಪಡೆದರೆ ಶೇ.97.5 ರಷ್ಟು ಪರಿಣಾಮಕಾರಿಯಾಗಿರಲಿದೆ.

ಯಾವುದೇ ಲಸಿಕೆ ಶೇ.100 ರಷ್ಟು ಪರಿಣಾಮಕಾರಿತ್ವವನ್ನು ಹೊಂದಿಲ್ಲ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ಬಹುವಿಧದ ಆರೋಗ್ಯ ಸಮಸ್ಯೆಗಳು ಹಾಗೂ ರೋಗನಿರೋಧಕ ಶಕ್ತಿಯ ಅಂಶಗಳೂ ಸಹ ಲಸಿಕೆ ಹೇಗೆ ಕಾರ್ಯನಿರ್ವಹಣೆ ಮಾಡಲಿದೆ ಎಂಬುದನ್ನು ನಿರ್ಧರಿಸಲಿವೆ ಎನ್ನುತ್ತಾರೆ ಏಮ್ಸ್ ನ ಪ್ರೊಫೆಸರ್ ಡಾ.ನೀರಜ್ ನಿಶ್ಚಲ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT