ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆಸ್ಟ್ರೇಲಿಯಾ ರಕ್ಷಣಾ ಸಚಿವ ಪೀಟರ್ ಡಟನ್ 
ದೇಶ

ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರ ಬಲವರ್ಧನೆಗೆ ಭಾರತ-ಆಸ್ಟ್ರೇಲಿಯಾ 2+2 ಮಾತುಕತೆ ಆರಂಭ

ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.

ನವದೆಹಲಿ: ಇಂಡೊ-ಪೆಸಿಫಿಕ್ ಭಾಗದಲ್ಲಿ ಚೀನಾದ ಹೆಚ್ಚಿದ ಮಿಲಿಟರಿ ಕಾರ್ಯಾಚರಣೆಯನ್ನು ಸಮರ್ಥವಾಗಿ ಎದುರಿಸಲು ಒಟ್ಟಾರೆಯಾಗಿ ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.

ಇಂದು ದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರಂಭದ ದಿನ 2+2 ಮಾತುಕತೆಯನ್ನು ಆಸ್ಟ್ರೇಲಿಯಾದ ವಿದೇಶಾಂಗ ಹಾಗೂ ರಕ್ಷಣಾ ಇಲಾಖೆ ಸಚಿವರುಗಳಾದ ಮಾರಿಸ್ ಪೇನ್ ಮತ್ತು ಪೀಟರ್ ಡಟನ್ ಜೊತೆ ನಡೆಸಿದ್ದಾರೆ.

ಇಂದು ಇಡೀ ವಿಶ್ವದ ಗಮನ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಮೇಲೆ ನೆಟ್ಟಿರುವುದರಿಂದ ಇಂದಿನ ಮಾತುಕತೆಯಲ್ಲಿ ಅಫ್ಘಾನಿಸ್ತಾನ ವಿಷಯ, ಮುಂದಿನ ದಿನಗಳಲ್ಲಿ ಆ ದೇಶದೊಂದಿಗೆ ಇಟ್ಟುಕೊಳ್ಳುವ ಸಂಬಂಧಗಳ ಬಗ್ಗೆ ಚರ್ಚೆ ನಡೆಯಿತು.

ತಮ್ಮ ಮಾತುಕತೆಯಲ್ಲಿ, ಇಬ್ಬರು ರಕ್ಷಣಾ ಮಂತ್ರಿಗಳು ಅಫ್ಘಾನಿಸ್ತಾನದ ದುರ್ಬಲ ಭದ್ರತಾ ಪರಿಸ್ಥಿತಿ ಮತ್ತು ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದ ಭಯೋತ್ಪಾದನೆಯ ಹರಡುವಿಕೆಗೆ ಸಂಬಂಧಿಸಿದಂತೆ ತಮ್ಮ ಕಳವಳ, ಆತಂಕವನ್ನು ವ್ಯಕ್ತಪಡಿಸಿದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ವಿಸ್ತರಿಸಲು ಕ್ವಾಡ್ ಸದಸ್ಯ ರಾಷ್ಟ್ರಗಳ ಹೊಸ ಪ್ರಯತ್ನಗಳ ನಡುವೆ ವಿದೇಶಿ ಮತ್ತು ರಕ್ಷಣಾ ಸಚಿವರ ಮಾತುಕತೆ ನಡೆಯುತ್ತಿದೆ.ಭಾರತ ಮತ್ತು ಆಸ್ಟ್ರೇಲಿಯಾವನ್ನು ಹೊರತುಪಡಿಸಿ, ಕ್ವಾಡ್ ಸದಸ್ಯ ದೇಶಗಳಲ್ಲಿ ಅಮೆರಿಕ ಮತ್ತು ಜಪಾನ್ ಕೂಡ ಸೇರಿದೆ.

ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಕಾರವನ್ನು ವಿಸ್ತರಿಸುವ ಒಟ್ಟಾರೆ ಗುರಿಯ ಭಾಗವಾಗಿ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವಿನ ಸಂವಾದ ನಡೆದಿದೆ.ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರಕ್ಷಣಾ ಮತ್ತು ಸೇನಾ ಸಹಕಾರವು ಹೆಚ್ಚುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!