ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆಸ್ಟ್ರೇಲಿಯಾ ರಕ್ಷಣಾ ಸಚಿವ ಪೀಟರ್ ಡಟನ್ 
ದೇಶ

ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರ ಬಲವರ್ಧನೆಗೆ ಭಾರತ-ಆಸ್ಟ್ರೇಲಿಯಾ 2+2 ಮಾತುಕತೆ ಆರಂಭ

ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.

ನವದೆಹಲಿ: ಇಂಡೊ-ಪೆಸಿಫಿಕ್ ಭಾಗದಲ್ಲಿ ಚೀನಾದ ಹೆಚ್ಚಿದ ಮಿಲಿಟರಿ ಕಾರ್ಯಾಚರಣೆಯನ್ನು ಸಮರ್ಥವಾಗಿ ಎದುರಿಸಲು ಒಟ್ಟಾರೆಯಾಗಿ ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.

ಇಂದು ದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರಂಭದ ದಿನ 2+2 ಮಾತುಕತೆಯನ್ನು ಆಸ್ಟ್ರೇಲಿಯಾದ ವಿದೇಶಾಂಗ ಹಾಗೂ ರಕ್ಷಣಾ ಇಲಾಖೆ ಸಚಿವರುಗಳಾದ ಮಾರಿಸ್ ಪೇನ್ ಮತ್ತು ಪೀಟರ್ ಡಟನ್ ಜೊತೆ ನಡೆಸಿದ್ದಾರೆ.

ಇಂದು ಇಡೀ ವಿಶ್ವದ ಗಮನ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಮೇಲೆ ನೆಟ್ಟಿರುವುದರಿಂದ ಇಂದಿನ ಮಾತುಕತೆಯಲ್ಲಿ ಅಫ್ಘಾನಿಸ್ತಾನ ವಿಷಯ, ಮುಂದಿನ ದಿನಗಳಲ್ಲಿ ಆ ದೇಶದೊಂದಿಗೆ ಇಟ್ಟುಕೊಳ್ಳುವ ಸಂಬಂಧಗಳ ಬಗ್ಗೆ ಚರ್ಚೆ ನಡೆಯಿತು.

ತಮ್ಮ ಮಾತುಕತೆಯಲ್ಲಿ, ಇಬ್ಬರು ರಕ್ಷಣಾ ಮಂತ್ರಿಗಳು ಅಫ್ಘಾನಿಸ್ತಾನದ ದುರ್ಬಲ ಭದ್ರತಾ ಪರಿಸ್ಥಿತಿ ಮತ್ತು ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದ ಭಯೋತ್ಪಾದನೆಯ ಹರಡುವಿಕೆಗೆ ಸಂಬಂಧಿಸಿದಂತೆ ತಮ್ಮ ಕಳವಳ, ಆತಂಕವನ್ನು ವ್ಯಕ್ತಪಡಿಸಿದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ವಿಸ್ತರಿಸಲು ಕ್ವಾಡ್ ಸದಸ್ಯ ರಾಷ್ಟ್ರಗಳ ಹೊಸ ಪ್ರಯತ್ನಗಳ ನಡುವೆ ವಿದೇಶಿ ಮತ್ತು ರಕ್ಷಣಾ ಸಚಿವರ ಮಾತುಕತೆ ನಡೆಯುತ್ತಿದೆ.ಭಾರತ ಮತ್ತು ಆಸ್ಟ್ರೇಲಿಯಾವನ್ನು ಹೊರತುಪಡಿಸಿ, ಕ್ವಾಡ್ ಸದಸ್ಯ ದೇಶಗಳಲ್ಲಿ ಅಮೆರಿಕ ಮತ್ತು ಜಪಾನ್ ಕೂಡ ಸೇರಿದೆ.

ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಕಾರವನ್ನು ವಿಸ್ತರಿಸುವ ಒಟ್ಟಾರೆ ಗುರಿಯ ಭಾಗವಾಗಿ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವಿನ ಸಂವಾದ ನಡೆದಿದೆ.ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರಕ್ಷಣಾ ಮತ್ತು ಸೇನಾ ಸಹಕಾರವು ಹೆಚ್ಚುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT