ಸಾಂದರ್ಭಿಕ ಚಿತ್ರ 
ದೇಶ

ನ್ಯೂಸ್ ಲಾಂಡ್ರಿ, ನ್ಯೂಸ್ ಕ್ಲಿಕ್ ಆನ್ ಲೈನ್ ಪತ್ರಿಕಾ ಕಚೇರಿಯಲ್ಲಿ ಐಟಿ ಕಾರ್ಯಾಚರಣೆ

ನ್ಯೂಸ್ ಲಾಂಡ್ರಿ ಮತ್ತು ನ್ಯೂಸ್ ಕ್ಲಿಕ್ ಕೇಂದ್ರ ಬಿಜೆಪಿ ಸರ್ಕಾರ ನೀತಿಗಳನ್ನು ಕಟುವಾಗಿ ವಿರೋಧಿಸುತ್ತಾ ಬಂದಿದ್ದವು. ಅಲ್ಲದೆ ಸದಾ ಸರ್ಕಾರದ ಪರ ಬ್ಯಾಟಿಂಗ್ ಮಾಡುತ್ತಿದ್ದ ಹಿಂಬಾಲಕರನ್ನು ಲೇವಡಿ ಮಾಡಿದ್ದವು.

ನವದೆಹಲಿ: ಆದಾಯ ತೆರಿಗೆ ಸಿಬ್ಬಂದಿ ನ್ಯೂಸ್ ಲಾಂಡ್ರಿ ಮತ್ತು ನ್ಯೂಸ್ ಕ್ಲಿಕ್ ಆನ್ ಲೈನ್ ಸುದ್ದಿತಾಣಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಐಟಿ ಇಲಾಖೆ ತಾವು ನಡೆಸಿರುವುದು ದಾಳಿಯಲ್ಲ, ಕೇವಲ ತಪಾಸಣೆ ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದ್ದಾರೆ. 

ತೆರಿಗೆ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕಚೇರಿಗಳಿಗೆ ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ. 

ಕಾರ್ಯಾಚರಣೆ ಸಂದರ್ಭ ಐಟಿ ಅಧಿಕಾರಿಗಳು ಕಚೇರಿ ಸಿಬ್ಬಂದಿಗಳ ಮೊಬೈಲುಫೋನುಗಳನ್ನು ಕಿತ್ತುಕೊಂಡು ಕಚೇರಿಯನ್ನು ಘೇರಾವ್ ಮಾಡಿದ್ದರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಮುಗಿಯುವ ತನಕ ಕಚೇರಿಯ ಯಾವುದೇ ಸಿಬ್ಬಂದಿ ಹೊರಗೆ ಹೋಗಲು ಅನುಮತಿ ನೀಡಲಾಗಿರಲಿಲ್ಲ ಎಂದು ತಿಳಿದುಬಂದಿದೆ.

ನ್ಯೂಸ್ ಲಾಂಡ್ರಿ ಆನ್ ಲೈನ್ ಸುದ್ದಿತಾಣ ಸ್ವತಂತ್ರ ಸುದ್ದಿತಾಣವಾಗಿದ್ದು, ಓದುಗರು ನೀಡುವ ಚಂದಾಹಣದಿಂದಲೇ ನಡೆಯುತ್ತಿರುವ ಮಾಧ್ಯಮ ಸಂಸ್ಥೆಯಾಗಿದೆ. ಈ ತಾಣ ಕೇಂದ್ರ ಸರ್ಕಾರದ ವಿರುದ್ಧ ಸುದ್ದಿಗಳನ್ನು ಪ್ರಕಟಿಸುತ್ತಲೇ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT