ಸಾಂದರ್ಭಿಕ ಚಿತ್ರ 
ದೇಶ

ಸೇಲಂ: ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾದ 19 ವರ್ಷ ವಿದ್ಯಾರ್ಥಿ

19 ವರ್ಷದ ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಸೇಲಂ: 19 ವರ್ಷದ ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಎಸ್ ಧನುಷ್(19) ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೇಲಂನ ಮೆಟ್ಟೂರು ಸಮೀಪದ ಕೂಝೈಯೂರ್ ನಿವಾಸಿ ಧನುಷ್ ಈ ಮೊದಲು ಎರಡು ಬಾರಿ ನೀಟ್‌ ಪರೀಕ್ಷೆ ಬರೆದಿದ್ದರು. ಆದರೆ ವೈದ್ಯಕೀಯ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಹಾಗಾಗಿ, ಅವರು ಭಾನುವಾರ ನಿಗದಿಯಾಗಿದ್ದ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಧನುಷ್ ಮೇಚೇರಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಮತ್ತೆ ನೀಟ್ ಪರೀಕ್ಷೆಯಲ್ಲಿ ಫೇಲ್ ಆಗಬಹುದು ಎಂಬ ಆತಂಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಧನುಷ್ ಪರೀಕ್ಷೆಗೆ ಗಂಭೀರವಾಗಿ ಮತ್ತು ಧೈರ್ಯದಿಂದ ತಯಾರಿ ನಡೆಸುತ್ತಿದ್ದ. "ಆದರೆ, ಇತ್ತೀಚಿನ ದಿನಗಳಲ್ಲಿ, ಅವನು ಪರೀಕ್ಷೆಯ ಬಗ್ಗೆ ಭಯ ಹೊಂದಿದ್ದನು ಮತ್ತು ಅದರಲ್ಲಿ ಯಶಸ್ವಿಯಾಗುತ್ತೇನೋ ಇಲ್ಲ ಎಂಬ ಕೊರಗ ಆತನನನ್ನು ಕಾಡುತ್ತಿತ್ತು. ನಿನ್ನೆ ರಾತ್ರಿಯೂ ಸಹ, ನಾವು ಅವನನ್ನು ಚೆನ್ನಾಗಿ ಬರೆಯುವಂತೆ ಪ್ರೋತ್ಸಾಹಿಸಿದ್ದೆವು ಎಂದು ಎಂಜಿನಿಯರಿಂಗ್ ಪದವೀಧರಾಗಿರುವ ಧನುಷ್ ಒಡಹುಟ್ಟಿದ ಸಹೋದರ ನಿಶಾಂತ್ ಹೇಳಿದ್ದಾರೆ.

ದುರದೃಷ್ಟವಶಾತ್, ಭಾನುವಾರ ಮುಂಜಾನೆ, ಧನುಷ್ ತನ್ನ ಕೋಣೆಯಲ್ಲಿ ಮೃತಪಟ್ಟಿರುವುದನ್ನು ನಾವು ನೋಡಿದೇವು ಎಂದು ನಿಶಾಂತ್ ತಿಳಿಸಿದ್ದಾರೆ.

ಕರುಮಲೈಕೂಡಲ್ ಪೊಲೀಸರು ಧನುಷ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನೀಟ್ ಪರೀಕ್ಷೆಗೆ ಯಲ್ಲಿಡುಗ ಸ್ವಲ್ಪ ಸಮಯ ಆತಂಕದಲ್ಲಿದ್ದ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT