ಅಭಿಷೇಕ್ ಬ್ಯಾನರ್ಜಿ 
ದೇಶ

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ

ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ. 

ಲಕನೌ: ಮುಂದಿನ ಚುನಾವಣೆಗೆ ಸಿದ್ಧವಾಗುತ್ತಿರುವ ಯೋಗಿ ಆದಿತ್ಯನಾಥರ ಬಿಜೆಪಿ ಸರ್ಕಾರ ರಾಜ್ಯದಲ್ಲಿ ತಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಜಾಹೀರಾತನ್ನು ಪ್ರಕಟಿಸಿತ್ತು. ಆ ಜಾಹೀರಾತುಗಳಲ್ಲಿ ಯೋಗಿ ಸರ್ಕಾರ ರಾಜ್ಯದ ರಸ್ತೆಗಳು, ಮೂಲ ಸೌಕರ್ಯಗಳ ಚಿತ್ರಗಳ ಜೊತೆಗೆ ಯೋಗಿ ಭಾವಚಿತ್ರವನ್ನು ಬಳಸಿಕೊಳ್ಳಲಾಗಿತ್ತು.


ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಕೋಲ್ಕತಾ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ. 


ಯೋಗಿಯವರ ಅಭಿವೃದ್ಧಿ ಕೆಲಸಗಳ ಜಾಹೀರಾತಿನಲ್ಲಿ ಪ.ಬಂಗಾಳದ ಫ್ಲೈ ಓವರ್ ಇರುವುದರಿಂದ ಬಿಜೆಪಿ ಸರ್ಕಾರ ಟಿ.ಎಂ.ಸಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎನ್ನುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT