ಘಟನೆಯ ದೃಶ್ಯ 
ದೇಶ

3 ಹಸುಳೆ ಸೇರಿ 19 ಮಂದಿ ಬಲಿ ಪಡೆದಿದ್ದ ವಿಮಾನ ಅಪಘಾತಕ್ಕೆ ಮಬ್ಬು, ವಿಂಡ್ ಶೀಲ್ಡ್ ವೈಪರ್ ಕಾರಣ

ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು.

ನವದೆಹಲಿ: ಕಳೆದ ವರ್ಷ ಕೋಝಿಕ್ಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಿದ್ದ ವಿಮಾನ ಅಪಘಾತಕ್ಕೆ ಮುಂಭಾಗದ ಮಬ್ಬಾಗಿದ್ದ ವಿಂಡ್ ಶೀಲ್ಡ್ ಕಾರಣ ಎಂಬುದು ತನಿಖಾವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಮಾನ ಅಪಘಾತ ತನಿಖಾ ಸಂಸ್ಥೆ ಅಪಘಾತದ ತನಿಖಾ ವರದಿಯನ್ನು ಸಲ್ಲಿಸಿದೆ. 

ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಅವಘಡದಲ್ಲಿ ಒಟ್ಟು 19 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ 3 ಹಸುಳೆಗಳೂ ಸೇರಿದ್ದವು.

ಟೇಬಲ್ ಟಾಪ್ ವಿಮಾನ ನಿಲ್ದಾಣವಾದ ಕೋಝಿಕ್ಕೋಡ್ ಏರ್ ಪೋರ್ಟ್ ನಲ್ಲಿ ವಿಮಾನ ಇಳಿಸುವ ವೇಳೆ ನತದೃಷ್ಟ ವಿಮಾನದ ವಿಂಡ್ ಶೀಲ್ಡ್ ಮಬ್ಬಾಗಿತ್ತು. ಇದರಿಂದ ಚಾಲಕನಿಗೆ ಎದುರಿನ ದೃಶ್ಯ ಚೆನ್ನಾಗಿ ಕಾಣಿಸಿರಲಿಲ್ಲ ಎಂಬುದು ತನಿಖೆ ವೇಳೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT