ಅರ್ಜುನ್ ಸಿಂಗ್ (ಮಧ್ಯದಲ್ಲಿರುವವರು) 
ದೇಶ

ಬಂಗಾಳ ಬಿಜೆಪಿ ಸಂಸದನ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ: ವಾರದಲ್ಲಿ 2ನೇ ಪ್ರಕರಣ

 ಬಂಗಾಳದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ.

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ. 

ವಾರದ ಹಿಂದೆ ಇಂತಹದ್ದೇ ಪ್ರಕರಣ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡ 24 ಗಂಟೆಗಳಲ್ಲಿ ಮತ್ತೊಮ್ಮೆ ಬಾಂಬ್ ನಿಂದ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಘಟನೆ ವರದಿಯಾಗುತ್ತಿದ್ದಂತೆಯೇ ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ಧಾವಿಸಿದ್ದು ಬಾಂಬ್ ಎಸೆದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಅರ್ಜುನ್ ಸಿಂಗ್, ಟಿಎಂಸಿ ವಿರುದ್ಧ ಆರೋಪ ಮಾಡಿದ್ದು, ದಾಳಿಗೆ ಕಾರಣರಾದ ಗೂಂಡಾಗಳಿಗೆ ಟಿಎಂಸಿ ರಕ್ಷಣೆ ನೀಡುತ್ತಿದೆ ಎಂದು ದೂರಿದ್ದಾರೆ. ಟಿಎಂಸಿ ಅರ್ಜುನ್ ಸಿಂಗ್ ಅವರ ಆರೋಪವನ್ನು ನಿರಾಕರಿಸಿದ್ದು, "ರಾಜಕೀಯವಾಗಿ ಚಾಲ್ತಿಯಲ್ಲಿರುವುದಕ್ಕೆ ಸಂಸದರೇ ಬಾಂಬ್ ಸ್ಫೋಟದ ನಾಟಕವಾಡಿದ್ದಾರೆ" ಎಂದು ಪ್ರತ್ಯಾರೋಪ ಮಾಡಿದೆ.

ಬುಧವಾರ ರಾಜ್ಯದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಗೊಂಡಿದ್ದ ಪ್ರಕರಣವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಘಟನೆಯನ್ನು ಖಂಡಿಸಿದ್ದರು.

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

11 ಬೌಂಡರಿ, 15 ಸಿಕ್ಸರ್... 32 ಎಸೆತಗಳಲ್ಲಿ ಶತಕ: ರಿಷಬ್ ಪಂತ್ ದಾಖಲೆಗೇ ಕುತ್ತು ತಂದಿದ್ದ Vaibhav Suryavanshi!

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

SCROLL FOR NEXT