ಸುಪ್ರೀಂ ಕೋರ್ಟ್ 
ದೇಶ

'ಕರುಣಾಜನಕ ಸ್ಥಿತಿ': 2 ವಾರಗಳಲ್ಲಿ ನ್ಯಾಯಮಂಡಳಿಗಳಿಗೆ ನೇಮಕಾತಿ ಮಾಡಿ; ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದೇಶದ ವಿವಿಧ ನ್ಯಾಯಮಂಡಳಿಗಳಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳು, ಮುಖ್ಯಸ್ಥರ ಕೊರತೆಯನ್ನು ತುರ್ತಾಗಿ 2 ವಾರಗಳಲ್ಲಿ ನೀಗಿಸುವಂತೆ ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.

ನವದೆಹಲಿ: ದೇಶದ ವಿವಿಧ ನ್ಯಾಯಮಂಡಳಿಗಳಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳು, ಮುಖ್ಯಸ್ಥರ ಕೊರತೆಯನ್ನು ತುರ್ತಾಗಿ 2 ವಾರಗಳಲ್ಲಿ ನೀಗಿಸುವಂತೆ ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.

ದೇಶದ ವಿವಿಧ ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರು ಮತ್ತು ನ್ಯಾಯಾಂಗ ಮತ್ತು ತಾಂತ್ರಿಕ ಸದಸ್ಯರ ಕೊರತೆಯ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮುಂದಿನ 2 ವಾರಗಳಲ್ಲಿ ಈ ಸಮಸ್ಯೆ ನೀಗಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. 

ಅಂತೆಯೇ ಈ ಪ್ರಕ್ರಿಯೆಯಲ್ಲಿ ಶಿಫಾರಸ್ಸು ಮಾಡಲಾದ ವ್ಯಕ್ತಿಯನ್ನು ತೆಗೆದರೆ ಅದಕ್ಕೆ ಸೂಕ್ತ ಉತ್ತರ ನೀಡುವಂತೆಯೂ ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ. 

ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, 'ರಾಷ್ಟ್ರದಾದ್ಯಂತದ ಅರೆ ನ್ಯಾಯಾಂಗ ಸಂಸ್ಥೆಗಳಲ್ಲಿ ಭರ್ತಿ ಮಾಡದಿರುವ ಹುದ್ದೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇದು 'ಕರುಣಾಜನಕ' ಸ್ಥಿತಿಯಾಗಿದ್ದು, ದಾವೆ ಹೂಡುವವರನ್ನು 'ಸುಮ್ಮನೆ ಬಿಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. 

ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು, ಶೋಧ ಮತ್ತು ಆಯ್ಕೆ ಸಮಿತಿಯಿಂದ ಶಿಫಾರಸು ಮಾಡಲಾದ ವ್ಯಕ್ತಿಗಳ ಪಟ್ಟಿಯಿಂದ ನ್ಯಾಯಮಂಡಳಿಗಳಲ್ಲಿ ಎರಡು ವಾರಗಳಲ್ಲಿ ಕೇಂದ್ರ ಸರ್ಕಾರವು ನೇಮಕಾತಿ ಮಾಡುವುದಾಗಿ ಪೀಠಕ್ಕೆ ಭರವಸೆ ನೀಡಿದರು.

ಮೂಲಗಳ ಪ್ರಕಾರ ವಿವಿಧ ಪ್ರಮುಖ ನ್ಯಾಯಾಧಿಕರಣಗಳು ಮತ್ತು ಮೇಲ್ಮನವಿ ನ್ಯಾಯಾಧಿಕರಣಗಳಲ್ಲಿ ಸುಮಾರು 250 ಹುದ್ದೆಗಳು ಖಾಲಿ ಇವೆ. ನ್ಯಾಯಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅರೆ ನ್ಯಾಯಾಂಗ ಸಂಸ್ಥೆಗಳನ್ನು ನಿಯಂತ್ರಿಸುವ ಹೊಸ ಕಾನೂನಿನ ಕುರಿತು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ