ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಜತೆ 11,000 ರೂ. ಡೆಪಾಸಿಟ್ ಮಾಡಬೇಕು

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮ ಅರ್ಜಿಗಳೊಂದಿಗೆ 11,000 ರೂ.ಗಳನ್ನು ಠೇವಣಿ ಮಾಡುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಸೂಚಿಸಿದೆ. 

ಲಖನೌ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮ ಅರ್ಜಿಗಳೊಂದಿಗೆ 11,000 ರೂ.ಗಳನ್ನು ಠೇವಣಿ ಮಾಡುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಸೂಚಿಸಿದೆ. 

ಗಂಭೀರವಾಗಿಲ್ಲದ ಅಭ್ಯರ್ಥಿಗಳನ್ನು ದೂರವಿಡುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

"ಎಲ್ಲಾ ಅರ್ಜಿದಾರರು ತಮ್ಮ ಅರ್ಜಿಗಳನ್ನು ಜಿಲ್ಲಾ/ರಾಜ್ಯ ಮಟ್ಟದಲ್ಲಿ ಅಧಿಕೃತ ವ್ಯಕ್ತಿಗಳೊಂದಿಗೆ 'ಸಹಯೋಗ ರಾಶಿ(ಕೊಡುಗೆ ಮೊತ್ತ)' 11,000 ರೂ. ಅನ್ನು ಸೆಪ್ಟೆಂಬರ್ 25, 2021 ರೊಳಗೆ ಸಲ್ಲಿಸಬೇಕು" ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ(ಯುಪಿಸಿಸಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರು  ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಪಕ್ಷವು ತನ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಚಿಂತನಶೀಲ ಅಧಿವೇಶನದ ನಂತರ ಕಳೆದ ವಾರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. 

"ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರು ರಾಜ್ಯ ಅಥವಾ ಜಿಲ್ಲಾ ಕೇಂದ್ರದಲ್ಲಿ ತಮ್ಮ ಅರ್ಜಿಗಳನ್ನು ನೀಡಬಹುದು" ಎಂದು ಕಾಂಗ್ರೆಸ್ ವಕ್ತಾರರಾದ ಡಾ ಉಮಾ ಶಂಕರ್ ಪಾಂಡೆ ಶನಿವಾರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT