ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

2022 ಕ್ಕೆ ಯುಪಿ ಚುನಾವಣೆ: ರೈತರ ವಿರುದ್ಧದ 900 ಕೇಸ್ ಹಿಂಪಡೆಯಲು ಯೋಗಿ ಸರ್ಕಾರ ನಿರ್ಧಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ, ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ, ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಪೈರನ್ನು ಸುಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣವಾದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ಹಾಕಲಾಗಿತ್ತು.

ಈ ಸಂಬಂಧದ ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ ನಂತರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ( ಗೃಹ) ಅವನಿಶ್ ಅವಾಸ್ತಿ ರೈತರ ಮೇಲಿನ ಕೇಸ್ ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿಯಲ್ಲಿ ರೈತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಆದ್ದರಿಂದ ಪೈರನ್ನು ಸುಟ್ಟಿದ್ದಕ್ಕಾಗಿ ರೈತರ ವಿರುದ್ಧ ಹಾಕಲಾಗಿದ್ದ 868 ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅವಾಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಕೊರೋನಾ ಸಾಂಕ್ರಾಮಿಕದಿಂದ ಆರ್ಥಿಕ ತೊಂದರೆಯಿಂದ ಸಂಕಷ್ಟ ಪಡುತ್ತಿರುವ ರೈತರ ಹಿತಾಸಕ್ತಿ ರಕ್ಷಿಸುವ ಸಲುವಾಗಿ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿದ್ದ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುವುದಾಗಿ ಅವಾಸ್ತಿ ಹೇಳಿದ್ದಾರೆ. 

ಪೈರನ್ನು ಸುಡುವುದಕ್ಕಾಗಿ ರೈತರ ಮೇಲೆ ಹಾಕಲಾಗಿರುವ ಕೇಸ್ ಗಳನ್ನು ಹಿಂಪಡೆಯುವುದಾಗಿ  ಈ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಭರವಸೆ ನೀಡಿದ್ದರು. ಒಂದು ವೇಳೆ ಯಾವುದೇ ದಂಡ ವಿಧಿಸಿದ್ದರೆ ಅದನ್ನು ಮನ್ನಾ ಮಾಡಲಾಗುವುದು, ಇದಲ್ಲದೇ, ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸುವ ವಿಚಾರವನ್ನು ಪರಗಣಿಸಲಾಗುವುದು ಎಂದು ಅಭಯ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT