ನವ್ ಜೋತ್ ಸಿಂಗ್ ಸಿಧು 
ದೇಶ

ಕೃಷಿ ಸುಧಾರಣಾ ಕಾನೂನಿಗೆ ಅಡಿಪಾಯ ಹಾಕಿದ್ದು ಬಾದಲ್ ಸೋದರರು, ಕೇಂದ್ರ ಅದನ್ನು ಕಾಪಿ ಹೊಡೆದಿದೆ ಅಷ್ಟೇ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು

ಈ ಬಗ್ಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಿಧು ಅವರು ಬಾದಲ್ ಅವರ ಹಳೆಯ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಸುಧಾರಣಾ ಕಾನೂನನ್ನು ಹೊಗಳುತ್ತಿರುವುದು ಕಂಡು ಬಂದಿದೆ.

ಚಂಡೀಘಡ: ರೈತರ ಪ್ರತಿಭಟನೆಗೆ ಕಾರಣವಾಗಿರುವ ವಿವಾದಾತ್ಮಕ ಕೃಷಿ ಸುಧಾರಣಾ ಕಾನೂನಿನ ಮೂಲ ನಿರ್ಮಾತೃ ಶಿರೋಮಣಿ ಅಕಾಲಿ ದಳ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವ್ ಜೋತ್ ಸಿಂಗ್ ಸಿಧು ಆರೋಪಿಸಿದ್ದಾರೆ. ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರದೇ ಯೋಜನೆ ಅದು ಎಂದು ಸಿಧು ಕೆಟಕಿಯಾಡಿದ್ದಾರೆ.

ಸಿಧು ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಿರೋಮಣಿ ಅಕಾಲಿ ದಳ ಸಿಧು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರೈತ ಸಮುದಾಯಕ್ಕೆ ನಿಜಕ್ಕೂ ಸಹಾಯ ಮಾಡುವ ಹಾಗಿದ್ದರೆ 2017ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಲಿ ಎಂದು ಟಾಂಗ್ ನೀಡಿದ್ದಾರೆ.  

ಈ ಬಗ್ಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಿಧು ಅವರು ಬಾದಲ್ ಅವರ ಹಳೆಯ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಸುಧಾರಣಾ ಕಾನೂನನ್ನು ಹೊಗಳುತ್ತಿರುವುದು ಕಂಡು ಬಂದಿದೆ. ನಂತರದ ವಿಡಿಯೋದಲ್ಲಿ ಅವರು ಅದೇ ಕಾನೂನನ್ನು ತೆಗಳುತ್ತಿರುವುದು ಕಂಡು ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT