ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಸೇನಾ ವಿಭಾಗದಕ್ಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸುವಾಗ ಸಂದೀಪ್ ಭಾರತೀಯ ಸೇನೆಗೆ ಸಂಬಂಧಿಸಿದ ಕಾರ್ಯತಂತ್ರದ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ನೆಲೆಯ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ನೀಡಲು ಆರೋಪಿಗೆ ಪಾಕಿಸ್ತಾನದ ಗೂಢಚರ್ಯರು ಹಣದ ಆಮಿಷ ನೀಡಿದ್ದರು. ಆರೋಪಿಯನ್ನು ಸೆಪ್ಟೆಂಬರ್ 12ರಂದು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ಡಿಜಿಪಿ(ಗುಪ್ತಚರ) ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT