ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಸೇನಾ ವಿಭಾಗದಕ್ಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸುವಾಗ ಸಂದೀಪ್ ಭಾರತೀಯ ಸೇನೆಗೆ ಸಂಬಂಧಿಸಿದ ಕಾರ್ಯತಂತ್ರದ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ನೆಲೆಯ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ನೀಡಲು ಆರೋಪಿಗೆ ಪಾಕಿಸ್ತಾನದ ಗೂಢಚರ್ಯರು ಹಣದ ಆಮಿಷ ನೀಡಿದ್ದರು. ಆರೋಪಿಯನ್ನು ಸೆಪ್ಟೆಂಬರ್ 12ರಂದು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ಡಿಜಿಪಿ(ಗುಪ್ತಚರ) ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT