ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಸೇನಾ ವಿಭಾಗದಕ್ಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸುವಾಗ ಸಂದೀಪ್ ಭಾರತೀಯ ಸೇನೆಗೆ ಸಂಬಂಧಿಸಿದ ಕಾರ್ಯತಂತ್ರದ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ನೆಲೆಯ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ನೀಡಲು ಆರೋಪಿಗೆ ಪಾಕಿಸ್ತಾನದ ಗೂಢಚರ್ಯರು ಹಣದ ಆಮಿಷ ನೀಡಿದ್ದರು. ಆರೋಪಿಯನ್ನು ಸೆಪ್ಟೆಂಬರ್ 12ರಂದು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ಡಿಜಿಪಿ(ಗುಪ್ತಚರ) ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾದ ಮಹಿಳೆ ವಿರುದ್ಧ FIR ದಾಖಲು!

ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!