ಸೈದಾಪೇಟ್ ಅತ್ಯಾಚಾರ ಪ್ರಕರಣದ ಆರೋಪಿ ಪಲ್ಲಂಕೊಂಡ ರಾಜು 
ದೇಶ

ಹೈದರಾಬಾದ್: 6 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿ ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಹೈದರಾಬಾದ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಹೌದು.. ಇಡೀ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಲೆನೋವಾಗಿದ್ದ ಆರೋಪಿ ಪತ್ತೆ ಕಾರ್ಯದಲ್ಲಿ ಕೊನೆಗೂ ಪೊಲೀಸರು ವಿಫಲರಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಲ್ಲಂಕೊಂಡ ರಾಜು ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.

ಸೈದಾಬಾದ್​ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ಪಲ್ಲಂಕೊಂಡ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಉನ್ನತ ಮೂಲಗಳು ಮಾಹಿತಿ ನೀಡಿದ್ದು, ರೈಲಿಗೆ ತಲೆಕೊಟ್ಟು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. 

ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಇದೇ ಸೆಪ್ಟೆಂಬರ್ 9ರಂದು ಹೈದರಾಬಾದ್​ನ ಸೈದಾಬಾದ್​ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಭೀಕರೃವಾಗಿ ಹತ್ಯೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕಿಯನ್ನು ಕೊಲೆಗೈದು ಆರೋಪಿ ಕಾಣೆಯಾಗಿದ್ದ. ಪೊಲೀಸರು ಆತನಿಗಾಗಿ ಸಾಕಷ್ಟು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದು, ಆತನ ಪತ್ತೆ ಸಾಧ್ಯವಾಗಿರಲಿಲ್ಲ. ಪೊಲೀಸರು ಈತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು.

ಇದೇ ವಿಚಾರವಾಗಿ ಮಾತನಾಡಿದ್ದ ತೆಲಂಗಾಣ ಗೃಹ ಸಚಿವರು ಆರೋಪಿಯನ್ನು ಎನ್ಕೌಂಟರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

ಉಪ್ಪಲ್ ಪ್ರದೇಶದಲ್ಲಿ ನಿನ್ನೆ ಸುತ್ತಾಡಿದ್ದನು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆದರೆ ಪೊಲೀಸರ ಕೈವಶವಾಗುವಷ್ಟರಲ್ಲಿಯೇ ಆತ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT