ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ 
ದೇಶ

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್​​ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಅಶ್ಲೀಲ ಚಿತ್ರ ಪ್ರಕರಣ ವಿಚಾರವಾಗಿ ತನಿಖೆ ನಡೆಸುತ್ತಿರುವ ಮುಂಬೈ ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಬುಧವಾರ 1500 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಎಸ್ ಪ್ಲನೇಡ್ ನ್ಯಾಯಾಲಯಕ್ಕೆ (Esplanade Court) ಸಲ್ಲಿಸಿದ್ದು, ಈ ಚಾರ್ಜ್ ಶೀಟ್ ನಲ್ಲಿ ರಾಜ್ ಕುಂದ್ರಾ ಪತ್ನಿ ಶಿಲ್ಪಾಶೆಟ್ಟಿ ಮತ್ತು ಈ ಹಿಂದೆ ಕಾಮಸೂತ್ರ 3ಡಿ ಚಿತ್ರದ ನಟಿ ಶೆರ್ಲಿನ್ ಚೋಪ್ರಾ, ಸೆಜಲ್ ಶಾ, ಹಲವು ಮಾಡೆಲ್​ಗಳು ಸೇರಿದಂತೆ ಸುಮಾರು 43 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕುಂದ್ರಾ ಕಂಪನಿಯ ಉದ್ಯೋಗಿಗಳ ಹೇಳಿಕೆಗಳನ್ನೂ ಆರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪ ಪಟ್ಟಿಯಲ್ಲಿ ಪ್ರಕರಣದಲ್ಲಿ ಬೇಕಾಗಿರುವ ಇಬ್ಬರು ಆರೋಪಿಗಳ ಹೆಸರೂ ಇದೆ ಎನ್ನಲಾಗಿದೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳನ್ನು ನಿರ್ಮಿಸುತ್ತಿರುವ ಆರೋಪದಲ್ಲಿ ಜುಲೈ 19ರಂದು ಇತರ 11 ಮಂದಿಯೊಂದಿಗೆ ಬಂಧಿಸಲಾಗಿತ್ತು.

ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾರನ್ನು ಜುಲೈನಲ್ಲಿ ಬಂಧಿಸಲಾಯಿತು. ಸಿಂಗಪುರದ ನಿವಾಸಿಯಾದ ಯಶ್ ಠಾಕೂರ್ ಮತ್ತು ಲಂಡನ್ ಮೂಲದ ಪ್ರದೀಪ್ ಬಕ್ಷಿ ಅವರನ್ನು ಇನ್ನಿಬ್ಬರು ಆರೋಪಿಗಳೆಂದು ಆರೋಪ ಪಟ್ಟಿಯಲ್ಲಿ ತೋರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT