ಅರ್ಪಿತಾ ಘೋಷ್ 
ದೇಶ

ರಾಜ್ಯಸಭೆಗೆ ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ರಾಜೀನಾಮೆ!

ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.

ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ ಎಂದು ರಾಜ್ಯಸಭೆಯ ಸಚಿವಾಲಯ ತಿಳಿಸಿದೆ.

ಅರ್ಪಿತಾ ಅವರು ರಾಜೀನಾಮೆ ನೀಡಿರುವುದು ಟಿಎಂಸಿ ಮುಖಂಡರಿಗೂ ಅಚ್ಚರಿ ಮೂಡಿಸಿದೆ. ಅರ್ಪಿತಾ ಅವರ ಕಾರ್ಯವೈಖರಿ ಬಗ್ಗೆ ಪಕ್ಷಕ್ಕೆ ತೃಪ್ತಿ ಇರಲಿಲ್ಲ. ಹೀಗಾಗಿ, ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಲುರ್ಘಾಟ್‌ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ, ಅರ್ಪಿತಾ ಅವರನ್ನು 2020ರ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ನಾಮನಿರ್ದೇಶನ ಮಾಡಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT