ವಾಂಗ್ ಯೀ-ಎಸ್ ಜೈಶಂಕರ್ 
ದೇಶ

ಫೂರ್ವ ಲಡಾಖ್: ಗಡಿ ವಿವಾದ ಕುರಿತು ಚೀನಾ ಸಚಿವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಹತ್ವದ ಮಾತುಕತೆ

ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

ಭಾರತ-ಚೀನಾ ಗಡಿ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಗ್‌ ಯಿ ಅವರೊಂದಿಗೆ ಚರ್ಚಿಸಿದರು ಎಂದು ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ದುಶಾಂಬೆಯಲ್ಲಿ ಗುರುವಾರ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು, ಎಲ್‌ಎಸಿ ಗಡಿಯಲ್ಲಿರುವ ಪರಿಸ್ಥಿತಿ ಕುರಿತು ಪರಸ್ಪರ ಅಭಿಪ್ರಾಯ ವಿನಿಯಮ ಮಾಡಿಕೊಂಡರು. ಹಾಗೆಯೇ, ಬಾಕಿ ಉಳಿದಿರುವ ಸಮಸ್ಯೆಗಳ ಶೀಘ್ರದಲ್ಲೇ ಬಗೆಹರಿಸುವುದಕ್ಕಾಗಿ ಎರಡೂ ರಾಷ್ಟ್ರಗಳ ಮಿಲಿಟರಿ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಭೇಟಿಯಾಗಿ ಚರ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು ಎಂದು ಹೇಳಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸಚಿವ ಜೈಶಂಕರ್ ಅವರು, ಭಾರತ ಯಾವುದೇ ನಾಗರಿಕತೆಯ ಸಂಘರ್ಷದ ಸಿದ್ಧಾಂತವನ್ನು ಪ್ರತಿಪಾದಿಸುವುದಿಲ್ಲ. ಹಾಗೆಯೇ, ಏಷ್ಯಾದ ಒಗ್ಗಟ್ಟು ಭಾರತ-ಚೀನಾ ಸಂಬಂಧಗಳ ಮಾದರಿಯ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ, ಉಭಯ ಕಡೆಯ ಮಿಲಿಟರಿ ಮತ್ತು ರಾಜತಾಂತ್ರಿಕ ಅಧಿಕಾರಿಗಳು ಮತ್ತೊಮ್ಮೆ ಭೇಟಿಯಾಗಿ ಉಳಿದ ಸಮಸ್ಯೆಗಳನ್ನು ಬೇಗನೆ ಪರಿಹರಿಸಲು ತಮ್ಮ ಚರ್ಚೆಗಳನ್ನು ಮುಂದುವರಿಸಬೇಕು ಎಂದು ವಾಂಗ್ ಯೀ ಅವರಿಗೆ ಹೇಳಿದರು ಎಂದು MEA ಹೇಳಿದೆ.

ಈ ಸಂದರ್ಭದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವರು (EAM) ವಿದೇಶಾಂಗ ಸಚಿವ ವಾಂಗ್ ಯಿ ತಮ್ಮ ಕೊನೆಯ ಸಭೆಯಲ್ಲಿ ದ್ವಿಪಕ್ಷೀಯ ಸಂಬಂಧಗಳು ಕಡಿಮೆಯಾಗಿರುವುದನ್ನು ನೆನಪಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT