ವಾಂಗ್ ಯೀ-ಎಸ್ ಜೈಶಂಕರ್ 
ದೇಶ

ಫೂರ್ವ ಲಡಾಖ್: ಗಡಿ ವಿವಾದ ಕುರಿತು ಚೀನಾ ಸಚಿವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಹತ್ವದ ಮಾತುಕತೆ

ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

ಭಾರತ-ಚೀನಾ ಗಡಿ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಗ್‌ ಯಿ ಅವರೊಂದಿಗೆ ಚರ್ಚಿಸಿದರು ಎಂದು ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ದುಶಾಂಬೆಯಲ್ಲಿ ಗುರುವಾರ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು, ಎಲ್‌ಎಸಿ ಗಡಿಯಲ್ಲಿರುವ ಪರಿಸ್ಥಿತಿ ಕುರಿತು ಪರಸ್ಪರ ಅಭಿಪ್ರಾಯ ವಿನಿಯಮ ಮಾಡಿಕೊಂಡರು. ಹಾಗೆಯೇ, ಬಾಕಿ ಉಳಿದಿರುವ ಸಮಸ್ಯೆಗಳ ಶೀಘ್ರದಲ್ಲೇ ಬಗೆಹರಿಸುವುದಕ್ಕಾಗಿ ಎರಡೂ ರಾಷ್ಟ್ರಗಳ ಮಿಲಿಟರಿ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಭೇಟಿಯಾಗಿ ಚರ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು ಎಂದು ಹೇಳಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸಚಿವ ಜೈಶಂಕರ್ ಅವರು, ಭಾರತ ಯಾವುದೇ ನಾಗರಿಕತೆಯ ಸಂಘರ್ಷದ ಸಿದ್ಧಾಂತವನ್ನು ಪ್ರತಿಪಾದಿಸುವುದಿಲ್ಲ. ಹಾಗೆಯೇ, ಏಷ್ಯಾದ ಒಗ್ಗಟ್ಟು ಭಾರತ-ಚೀನಾ ಸಂಬಂಧಗಳ ಮಾದರಿಯ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ, ಉಭಯ ಕಡೆಯ ಮಿಲಿಟರಿ ಮತ್ತು ರಾಜತಾಂತ್ರಿಕ ಅಧಿಕಾರಿಗಳು ಮತ್ತೊಮ್ಮೆ ಭೇಟಿಯಾಗಿ ಉಳಿದ ಸಮಸ್ಯೆಗಳನ್ನು ಬೇಗನೆ ಪರಿಹರಿಸಲು ತಮ್ಮ ಚರ್ಚೆಗಳನ್ನು ಮುಂದುವರಿಸಬೇಕು ಎಂದು ವಾಂಗ್ ಯೀ ಅವರಿಗೆ ಹೇಳಿದರು ಎಂದು MEA ಹೇಳಿದೆ.

ಈ ಸಂದರ್ಭದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವರು (EAM) ವಿದೇಶಾಂಗ ಸಚಿವ ವಾಂಗ್ ಯಿ ತಮ್ಮ ಕೊನೆಯ ಸಭೆಯಲ್ಲಿ ದ್ವಿಪಕ್ಷೀಯ ಸಂಬಂಧಗಳು ಕಡಿಮೆಯಾಗಿರುವುದನ್ನು ನೆನಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT