ಎಲ್. ಮುರುಗನ್ 
ದೇಶ

ರಾಜ್ಯಸಭೆ ಚುನಾವಣೆ: ಕೇಂದ್ರ ಸಚಿವ ಎಲ್. ಮುರುಗನ್ ಮಧ್ಯಪ್ರದೇಶದಿಂದ ಕಣಕ್ಕೆ

ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಶನಿವಾರ ಘೋಷಿಸಿದೆ.

ಚೆನ್ನೈ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಶನಿವಾರ ಘೋಷಿಸಿದೆ.

ಮುರುಗನ್ ಅವರು ಜುಲೈ 7 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಂಸದರಲ್ಲದ ಅವರು ಮುಂದಿನ ಆರು ತಿಂಗಳೊಳಗೆ ಲೋಕಸಭೆ ಅಥವಾ ರಾಜ್ಯಸಭೆಗೆ ಆಯ್ಕೆಯಾಗಬೇಕಾಗಿತ್ತು. ಹೀಗಾಗಿ ರಾಜ್ಯಸಭೆ ಉಪ ಚುನಾವಣೆಗೆ ಮಧ್ಯಪ್ರದೇಶದಿಂದ ಕಣಕ್ಕಿಳಿದಿದ್ದಾರೆ. 

ತಮ್ಮನ್ನು ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿದ ಮುರುಗನ್, "ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಧ್ಯ ಪ್ರದೇಶ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಮುರುಗನ್ ಅವರು ಪುದುಚೇರಿಯಿಂದ ಚುನಾಯಿತರಾಗಬಹುದು ಎಂಬ ಮಾತುಗಳು ಕೇಳಿಬಂದಿತ್ತು.

ಮಧ್ಯಪ್ರದೇಶದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಗೊಂಡ ನಂತರ, ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!