ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿರುವ ಅಮರೀಂದರ್ ಸಿಂಗ್ 
ದೇಶ

'ಮೂರು ಬಾರಿ ಅವಮಾನಿಸಲಾಗಿದೆ': ಪಂಜಾಬ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಚಂಡಿಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಮರೀಂದ್ ಸಿಂಗ್ ಅವರು ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರೀಂದರ್ ಸಿಂಗ್ ಅವರು, ನಾನು ಅವಮಾನಿತನಾಗಿದ್ದೇನೆ. "ಅವರು ನಂಬುವವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು" ಕಾಂಗ್ರೆಸ್ ಮುಕ್ತವಾಗಿದೆ. "ಸಮಯ ಬಂದಾಗ ನನ್ನ ಮುಂದಿನ ಆಯ್ಕೆಗಳನ್ನು ತಿಳಿಸುತ್ತೇನೆ" ಎಂದು ಹೇಳಿದ್ದಾರೆ.

ಪಂಜಾಬ್ ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಇಂದು ಬೆಳಗ್ಗೆ ರಾಜೀನಾಮೆ ನೀಡುವಂತೆ ಅಮರೀಂದರ್ ಸಿಂಗ್ ಅವರಿಗೆ ಸೂಚಿಸಿದ್ದರು. ಈ ವೇಳೆ "ನಾನು ಸಾಕಷ್ಟು ಅವಮಾನವನ್ನು ಸಹಿಸಿಕೊಂಡಿದ್ದೇನೆ. ಈ ರೀತಿಯ ಅವಮಾನ ಸಾಕು, ನನಗೆ ಮೂರನೇ ಬಾರಿ ಅವಮಾನವಾಗುತ್ತಿದೆ. ಈ ರೀತಿಯ ಅವಮಾನದಿಂದ ನಾನು ಪಕ್ಷದಲ್ಲಿ ಉಳಿಯಲು ಸಾಧ್ಯವಿಲ್ಲ" ಎಂದು "ಕ್ಯಾಪ್ಟನ್" ಅಮರೀಂದರ್ ಸಿಂಗ್ ಅವರು ಸೋನಿಯಾ ಗಾಂಧಿಗೆ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಇಂದು ಸಂಜೆ ಪಕ್ಷದ ಶಾಸಕರ ಸಭೆಯ ನಂತರ ಹೊಸ ನಾಯಕನನ್ನು ನಿರ್ಧರಿಸುವ ನಿರೀಕ್ಷೆಯಿದೆ.

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಲುಧಿಯಾನಾ ಸಂಸದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜ್ಯಸಭಾ ಸಂಸದ ಪರ್ತಪ್ ಸಿಂಗ್ ಬಾಜ್ವಾ ಅವರು ನೂತನ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಮುಖ್ಯಮಂತ್ರಿ ರೇಸ್ ನಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!