ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್

ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಚಂಡೀಘಡ: ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ರಾಜಿನಾಮೆ ಬೆನ್ನಲ್ಲೇ ಎಎನ್ಐ ಸುದ್ದಿಸಂಸ್ಥೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅಮರೀಂದರ್ ಸಿಂಗ್ ಅವರು, ನವಜೋತ್‌ ಸಿಂಗ್‌ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ನಾನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

'ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ನಾನು ವಿರೋಧಿಸುತ್ತೇನೆ. ಹಾಗೆಯೇ, ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ಸಿಧು ʼಅಸಮರ್ಥʼ ಎಂದೂ ಅಮರೀಂದರ್ ಸಿಂಗ್ ಟೀಕಿಸಿದ್ದಾರೆ.

ʼನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಿಧು ಹೆಸರನ್ನು ವಿರೋಧಿಸುತ್ತೇನೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿ... ಸಿದ್ದುಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಜೊತೆ ಸಂಬಂಧವಿದೆ. ದೇಶಕ್ಕಾಗಿ ಹಲವು ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಪಾಕಿಸ್ತಾನದ ದಾಳಿಯಲ್ಲಿ ನಾನು ನೂರಾರು ಸೈನಿಕರನ್ನು ಕಳೆದುಕೊಂಡಿದ್ದೇವೆ. ಅವರ ಪ್ರಾಣ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡಬಾರದು ಎಂದು ಹೇಳಿದರು. 

ಆದಾಗ್ಯೂ, ಸಿಧು ಅವರನ್ನು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರಾಗಿ ಮುಂದುವರಿಸಬೇಕೇ ಎಂಬುದನ್ನು ಪಕ್ಷವು ನಿರ್ಧರಿಸಲಿದೆ ಎಂದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT