ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್

ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಚಂಡೀಘಡ: ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ರಾಜಿನಾಮೆ ಬೆನ್ನಲ್ಲೇ ಎಎನ್ಐ ಸುದ್ದಿಸಂಸ್ಥೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅಮರೀಂದರ್ ಸಿಂಗ್ ಅವರು, ನವಜೋತ್‌ ಸಿಂಗ್‌ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ನಾನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

'ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ನಾನು ವಿರೋಧಿಸುತ್ತೇನೆ. ಹಾಗೆಯೇ, ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ಸಿಧು ʼಅಸಮರ್ಥʼ ಎಂದೂ ಅಮರೀಂದರ್ ಸಿಂಗ್ ಟೀಕಿಸಿದ್ದಾರೆ.

ʼನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಿಧು ಹೆಸರನ್ನು ವಿರೋಧಿಸುತ್ತೇನೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿ... ಸಿದ್ದುಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಜೊತೆ ಸಂಬಂಧವಿದೆ. ದೇಶಕ್ಕಾಗಿ ಹಲವು ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಪಾಕಿಸ್ತಾನದ ದಾಳಿಯಲ್ಲಿ ನಾನು ನೂರಾರು ಸೈನಿಕರನ್ನು ಕಳೆದುಕೊಂಡಿದ್ದೇವೆ. ಅವರ ಪ್ರಾಣ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡಬಾರದು ಎಂದು ಹೇಳಿದರು. 

ಆದಾಗ್ಯೂ, ಸಿಧು ಅವರನ್ನು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರಾಗಿ ಮುಂದುವರಿಸಬೇಕೇ ಎಂಬುದನ್ನು ಪಕ್ಷವು ನಿರ್ಧರಿಸಲಿದೆ ಎಂದಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT