ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್

ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಚಂಡೀಘಡ: ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ರಾಜಿನಾಮೆ ಬೆನ್ನಲ್ಲೇ ಎಎನ್ಐ ಸುದ್ದಿಸಂಸ್ಥೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅಮರೀಂದರ್ ಸಿಂಗ್ ಅವರು, ನವಜೋತ್‌ ಸಿಂಗ್‌ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ನಾನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

'ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ನಾನು ವಿರೋಧಿಸುತ್ತೇನೆ. ಹಾಗೆಯೇ, ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ಸಿಧು ʼಅಸಮರ್ಥʼ ಎಂದೂ ಅಮರೀಂದರ್ ಸಿಂಗ್ ಟೀಕಿಸಿದ್ದಾರೆ.

ʼನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಿಧು ಹೆಸರನ್ನು ವಿರೋಧಿಸುತ್ತೇನೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿ... ಸಿದ್ದುಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಜೊತೆ ಸಂಬಂಧವಿದೆ. ದೇಶಕ್ಕಾಗಿ ಹಲವು ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಪಾಕಿಸ್ತಾನದ ದಾಳಿಯಲ್ಲಿ ನಾನು ನೂರಾರು ಸೈನಿಕರನ್ನು ಕಳೆದುಕೊಂಡಿದ್ದೇವೆ. ಅವರ ಪ್ರಾಣ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡಬಾರದು ಎಂದು ಹೇಳಿದರು. 

ಆದಾಗ್ಯೂ, ಸಿಧು ಅವರನ್ನು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರಾಗಿ ಮುಂದುವರಿಸಬೇಕೇ ಎಂಬುದನ್ನು ಪಕ್ಷವು ನಿರ್ಧರಿಸಲಿದೆ ಎಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ