ಪ್ಯಾನ್ ಕಾರ್ಡ್-ಆಧಾರ್ ಜೋಡಣೆಗೆ 3-6 ತಿಂಗಳ ಕಾಲಾವಕಾಶ ಸಾಧ್ಯತೆ 
ದೇಶ

ಪ್ಯಾನ್‌ ಕಾರ್ಡ್ ಗೆ ಆಧಾರ್ ಜೋಡಣೆ; ಮಾ.31ರ ವರೆಗೆ ಅಂತಿಮ ಗಡುವು ವಿಸ್ತರಣೆ

ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಯ ಸಮಯವನ್ನು2022ರ ಮಾರ್ಚ್ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ನವದೆಹಲಿ: ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಯ ಸಮಯವನ್ನು2022ರ ಮಾರ್ಚ್ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ಫ್ಯಾನ್ ಆಧಾರ್ ಸಂಖ್ಯೆಯ ಜೋಡಣೆ ಅವಧಿ ಮಾಡಲು ಸೆಪ್ಟೆಂಬರ್ 31ರವರೆಗೆ ಕೇಂದ್ರ ಸರ್ಕಾರ ಸಮಯ ನೀಡಿತ್ತು. ಇದೀಗ ಅವಧಿಯನ್ನು ಮತ್ತೆ 6 ತಿಂಗಳು ವಿಸ್ತರಣೆ ಮಾಡಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ವಿಸ್ತರಣೆ ಮಾಡಿರುವುದರಿಂದ ಇದುವರೆಗೂ ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆ ಮಾಡಿದ ಮಂದಿ ಸಂಖ್ಯೆ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆ ಜೋಡಣೆಯಾಗಿದೆ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆಗಳು ಮತ್ತು ದೂರುಗಳು ಹಾಗೂ ಆಕ್ಷೇಪಣೆಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ದೇಶದಲ್ಲಿ ಮೊದಲ ಮತ್ತು ಎರಡನೇ ಅಲೆಯ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ನಿಗದಿತ ಕೇಂದ್ರಗಳಿಗೆ ತೆರಳಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ನಿಗದಿತ ಗಡುವಿನೊಳಗೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ೨೦೨೨ ರ ಮಾರ್ಚ್ ೩೧ರವರೆಗೆ ಈ ಅವಧಿಯನ್ನು ವಿಸ್ತರಿಸಿ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಬರುವ ಕೇಂದ್ರ ನೇರ ತೆರಿಗೆ ಮಂಡಳಿ ಆಧಾರ್ ಸಂಖ್ಯೆ ಜೋಡಣೆ ಮಾಡುವ ಸಮಯವನ್ನು ಮುಂದಿನ ಆರು ತಿಂಗಳ ಕಾಲ ವಿಸ್ತರಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದೆ. ಆಧಾರ್ ಸಂಖ್ಯೆಗೆ ಪ್ಯಾನ್ ಸಂಖ್ಯೆ ಜೋಡಣೆ ಮಾಡುವುದರಿಂದ ಹಲವು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮತ್ತು ಇನ್ನಿತರ ಯೋಜನೆಗಳಿಗೆ ಸಹಕಾರಿಯಾಗಲಿದೆ ಹೀಗಾಗಿ ನಿಗದಿತ ಗಡುವಿನಲ್ಲಿ ಜೋಡಣೆ ಮಾಡಿ ಎಂದು ತಿಳಿಸಲಾಗಿದೆ. ಪಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಗೆ ಈಗಾಗಲೇ ಹಲವು ಬಾರಿ ನೀಡಿದ್ದ ಗಡುವು ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT