ಶಶಿ ತರೂರ್ 
ದೇಶ

ಕಾಂಗ್ರೆಸ್ ಗೆ ಶೀಘ್ರ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು: ಶಶಿ ತರೂರ್

'ಈಗ ಮಧ್ಯಂತರ ಹಂತದಲ್ಲಿರುವ' ಪಕ್ಷವನ್ನು ಮುನ್ನಡೆಸಲು ಶೀಘ್ರ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಅವರು ಶನಿವಾರ ಹೇಳಿದ್ದಾರೆ.

ಕೊಚ್ಚಿ: 'ಈಗ ಮಧ್ಯಂತರ ಹಂತದಲ್ಲಿರುವ' ಪಕ್ಷವನ್ನು ಮುನ್ನಡೆಸಲು ಶೀಘ್ರ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಅವರು ಶನಿವಾರ ಹೇಳಿದ್ದಾರೆ.

ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಎಲ್ಲಾ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಶಶಿ ತರೂರ್ ತಿಳಿಸಿದ್ದಾರೆ.

"ನಾವೆಲ್ಲರೂ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಇಷ್ಟಪಟ್ಟೆವು. ಆದರೆ ನಾವು ಈಗ ಮಧ್ಯಂತರ ಹಂತದಲ್ಲಿದ್ದೇವೆ. ಕಳೆದ ಎರಡು ವರ್ಷಗಳಿಂದ ನಾವು ಖಾಯಂ ಅಧ್ಯಕ್ಷರನ್ನು ಹೊಂದಿಲ್ಲ. ಅದನ್ನು ಸರಿಪಡಿಸಬೇಕು. ಕಾಂಗ್ರೆಸ್ ಸಂಘಟನೆಯಲ್ಲಿ ನಾವು ಶಕ್ತಿಯನ್ನು ತುಂಬಬೇಕು. ನಾವೆಲ್ಲರೂ ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ಬಯಸಿದ್ದೇವೆ, "ಎಂದು ಅವರು ಹೇಳಿದ್ದಾರೆ.

ಮೂವಾಟ್ಟುಪುಳಾ ಶಾಸಕ ಮ್ಯಾಥ್ಯೂ ಕುಜಲ್ನಾಡನ್‌ ಅವರ ಕಚೇರಿ ಉದ್ಘಾಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ಸೋನಿಯಾ ಗಾಂಧಿ ಅವರು ಹಲವು ವರ್ಷಗಳಿಂದ ತಮ್ಮ ಕರ್ತವ್ಯದಿಂದ ಬಿಡುಗಡೆ ಹೊಂದಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳಲು ಬಯಸಿದರೆ, ಅದು ಶೀಘ್ರವಾಗಿ ಆಗಬೇಕು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕಾದರೆ ಈ ಕೆಲಸಗಳು ಬೇಗನೆ ಆಗಬೇಕು ಎಂದು ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT