ಸಾಂದರ್ಭಿಕ ಚಿತ್ರ 
ದೇಶ

ಸಾಕ್ಷರತಾ ನಾಡಲ್ಲಿ ಬಾಲ್ಯವಿವಾಹ: ಬಾಲಕಿಯ ಪತಿ, ಪೋಷಕರ ವಿರುದ್ಧ ದೂರು ದಾಖಲು 

ದೇಶದಲ್ಲಿ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿರುವ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆ 25 ವರ್ಷದ ಪುರುಷನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹ ವರದಿಯಾಗಿದ್ದು, ಬಾಲಕಿಯ ಪತಿ, ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಮಲಪ್ಪುರಂ: ದೇಶದಲ್ಲಿ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿರುವ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆ 25 ವರ್ಷದ ಪುರುಷನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹ ವರದಿಯಾಗಿದ್ದು, ಬಾಲಕಿಯ ಪತಿ, ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಆಕೆಯನ್ನು ವಿವಾಹವಾದ ವ್ಯಕ್ತಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮದುವೆಗೆ ಸಹಕರಿಸಿದ್ದ ಬಾಲಕಿಯ ಪತಿ, ಹಾಗೂ ಆಕೆಯ ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಕುರುವರಕುಂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೆಚ್ ಎಸ್ ಒ ಮನೋಜ್ ಪರಯಟ್ಟ ಪಿಟಿಐಗೆ ಹೇಳಿದ್ದಾರೆ.

ಅಡುಗೆಯವರು, ವಿಡಿಯೋಗ್ರಾಫರ್, ಅತಿಥಿಗಳು ಸೇರಿದಂತೆ ಮದುವೆಯಲ್ಲಿ ಪಾಲ್ಗೊಂಡಿದ್ದ ಎಲ್ಲರ ಮೇಲೂ ಬಾಲ್ಯ ವಿವಾಹ ಕಾಯ್ದೆ ನಿಷೇಧ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬಹುದಾಗಿದೆ. ಬಾಲ್ಯ ವಿವಾಹ  ಮಾಡಿದ್ದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಗರಿಷ್ಠ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ವಾರದ ಹಿಂದೆಯೇ ಮದುವೆ ನಡೆದಿದ್ದು, ವಿವಿಧ ಇಲಾಖೆಗಳು ಹಾಗೂ ಪೊಲೀಸ್ ಜಂಟಿಯಾಗಿ ಪ್ರಾಥಮಿಕ ತನಿಖೆ ನಡೆಸಿದ ನಂತರ ಕೇಸ್ ದಾಖಲಿಸಲಾಗಿದೆ. ಪ್ರಸ್ತುತ ಬಾಲಕಿ ಆಕೆಯ ಪೋಷಕರೊಂದಿಗೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.  ಆದರೆ, ಈವರೆಗೆ ಯಾರನ್ನೂ ಬಂಧಿಸಿಲ್ಲ, ಈ ವಿಚಾರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT