ಅಶೋಕ್ ಗೆಹ್ಲೋಟ್ 
ದೇಶ

ಅಮರೀಂದರ್ ಸಿಂಗ್ ಪಕ್ಷದ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ: ಅಶೋಕ್ ಗೆಹ್ಲೋಟ್

ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಹೇಳಿದ್ದಾರೆ. 

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಹೇಳಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಅವರು, ಸೇನೆಯ ಮಾಜಿ ಕ್ಯಾಪ್ಟನ್‌, ಪಕ್ಷದ ಗೌರವಾನ್ವಿತ ಮುಖಂಡರು, ಮುಂದೆಯೂ ಕಾಂಗ್ರೆಸ್‌ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮುಂದುವರಿಯುವ ಭರವಸೆ ಇದೆ ಎಂದು ಹೇಳಿದ್ದಾರೆ. 

ಕ್ಯಾಪ್ಟನ್‌ ಸಾಹೇಬರೇ ಸ್ವತಃ ಹೇಳಿರುವಂತೆ, ಅವರಿಗೆ ಪಕ್ಷವು ಒಂಬತ್ತೂವರೆ ವರ್ಷಗಳು ಪ್ರಮುಖ ಹೊಣೆಗಾರಿಕೆಯನ್ನು ನೀಡಿದೆ ಹಾಗೂ ಪಂಜಾಬ್‌ನ ಜನತೆಗೆ ಸೇವೆ ಸಲ್ಲಿಸುವ ಕರ್ತವ್ಯವನ್ನು ಅವರು ಅತ್ಯಂತ ಪ್ರಾಮಾಣಿಕವಾಗಿ ಪೂರೈಸಿದ್ದಾರೆಂದು ತಿಳಿಸಿದ್ದಾರೆ. 

ಪಕ್ಷದ ಹೈಕಮಾಂಡ್ ಕೇವಲ ಶಾಸಕರು ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಹಾಗೂ ನಾಯಕರು ಪಕ್ಷದ ಹಿತದೃಷ್ಟಿಯಿಂದ ಯೋಚಿಸಬೇಕು ಎಂದಿದ್ದಾರೆ. 

ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಈಗ ಸೋನಿಯಾ ಗಾಂಧಿ ಅವರ ಅಂಗಳದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT